ಐಪಿಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶಕ್ಕೆ ತಡೆ

 

 

 

 

ಬೆಂಗಳೂರು: ಐಪಿಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ತಡೆಹಿಡಿದಿದೆ.

ಜನವರಿ 27ರಂದು ಸರ್ಕಾರ ರವಿ ಚನ್ನಣ್ಣವರ್​ ಸೇರಿದಂತೆ 9 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿಯಾಗಿರುವ ರವಿ ಚನ್ನಣ್ಣವರ್​ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸರ್ಕಾರ ವರ್ಗಾವಣೆ ಮಾಡಿತ್ತು.

 

 

ಆದರೆ, ಇದೀಗ ಸರ್ಕಾರ ವರ್ಗಾವಣೆ ಆದೇಶವನ್ನು ಏಕಾಏಕಿ ತಡೆಹಿಡಿದಿದ್ದು, ಈ ಬಗ್ಗೆ ಜ. 28ರಂದು ಆದೇಶ ಹೊರಡಿಸಿದೆ. ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ರವಿ ಚನ್ನಣ್ಣವರ್ ವರ್ಗಾವಣೆಗೆ ಸರ್ಕಾರ ಬ್ರೇಕ್​ ಹಾಕಿದೆ. ​

ಕೆಲ ದಿನಗಳಿಂದ ರವಿ ಚನ್ನಣ್ಣವರ್​ ಅವರು ತುಂಬಾ ಸುದ್ದಿಯಲ್ಲಿದ್ದಾರೆ. ಅವರ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದೆ. ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ.

[t4b-ticker]

You May Also Like

More From Author

+ There are no comments

Add yours