ಚಳ್ಳಕೆರೆ ನಗರದಲ್ಲಿ 30ರಂದು ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆ.

 

 

 

 

ಚಳ್ಳಕೆರೆ-18 ಸಮುದಾಯದ ವತಿಯಿಂದ ಇದೇ ತಿಂಗಳ 30ರಂದು ಅದ್ದೂರಿ ಆಚರಣೆ ಮಾಡಲು ನಿರ್ಧರಿಸಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು

 

 

ಅವರು, ಸೋಮವಾರ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ವಾಲ್ಮೀಕಿ ಸಮುದಾಯದ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಮುಖಂಡರನ್ನು ಆಹ್ವಾನಿಸಿ ವಾಲ್ಮೀಕಿಯವರ ವಿಚಾರಧಾರೆಗಳನ್ನು ಸಮಸ್ತ ಜನತೆಗೆ ನೀಡುವ ಉತ್ತಮ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿವುದಲ್ಲದೆ, ಎಲ್ಲರೂ ಶ್ರೀವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಪಾಲ್ಗೊಳ್ಳಬೇಕು ಎಂದರು.
ಅ.30ರ ಭಾನುವಾರ ಶ್ರೀವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಗುರುರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಚಿತ್ರದುರ್ಗ ರಸ್ತೆಯ ಶ್ರೀವಾಲ್ಮೀಕಿ ವೃತ್ತದಿಂದ ಮೆರವಣಿಗೆ ಪ್ರಾರಂಭಗೊಂಡು ನಗರದ ಪ್ರಮುಖ‌ ಬೀದಿಗಳಲ್ಲಿ ಸಾಗಲಿದೆ. ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು ಹೆಚ್ಚಿನ‌ ಸಂಖ್ಯೆಯಲ್ಲಿ ಇರುವಂತೆ ನೋಡಿಕೊಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತಹಶೀಲ್ಧಾರ್ ಎನ್.ರಘುಮೂರ್ತಿ, ಸಿಪಿಐ ಉಮೇಶ್, ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಜೆ.ಪಿ.ಜಯಪಾಲಯ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಳೆಮಂಡಿರಾಮದಾಸ್, ಜೆಡಿಎಸ್ ಮುಖಂಡ ಎಂ.ರವೀಶ್‍ಕುಮಾರ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಸಮುದಾಯದ ಯುವ ಮುಖಂಡ ಕೆ.ಟಿ.ಕುಮಾರಸ್ವಾಮಿ ಮುಂತಾದವರು ಪೂರ್ವಭಾವಿಸಭೆಯಲ್ಲಿ ಪಾಲ್ಗೊಂಡಿದ್ದರು.

[t4b-ticker]

You May Also Like

More From Author

+ There are no comments

Add yours