ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಗಣಿತ ಮತ್ತು ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
” ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಚಿತ್ರದುರ್ಗ ಇವರು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಂಡಿದ್ದು, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಬಹು ದಾಗಿದೆ. ಈ ಸ್ಪರ್ಧೆಯು ಇದೇ ಆಗಸ್ಟ್ 20 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗದ ವಿದ್ಯಾ ವಿಕಾಸ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿದೆ. ಭಾಗವಹಿಸುವ ವಿದ್ಯಾರ್ಥಿಗಳು ಇದೇ ತಿಂಗಳ 12 ರ ಒಳಗಾಗಿ ಕೊಟ್ಟಿರುವ ಲಿಂಕ್ ಮೂಲಕ ನೋಂದಣಿ ಮಾಡಿ ಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸ್ಪರ್ಧೆಯ ಜಿಲ್ಲಾ ಸಂಯೋಜಕ ಸಿ. ಜಿ. ಹಾಲೇಶ ಇವರನ್ನು ಸಂಪರ್ಕಿಸಬಹುದು ಎಂದು ಕ. ರಾ. ವಿ. ಪ. ರಾಜ್ಯ ಸಮಿತಿ ಸದಸ್ಯ ಹೆಚ್. ಎಸ್. ಟಿ. ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊಬೈಲ್ :
7760932325 ಹಾಗೂ 9448565534 ಗಳಿಗೆ ಸಂಪರ್ಕಿಸಬಹುದು.
+ There are no comments
Add yours