ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.02:
ಚಿತ್ರದುರ್ಗ ತಾಲ್ಲೂಕು ಭೀಮಸಮುದ್ರ ಗ್ರಾಮ ಪಂಚಾಯಿತಿಯಲ್ಲಿ ಸ್ವ ಸಹಾಯ ಸಂಘದ ಮಹಿಳೆಯರಿಗೆ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಅವರು ಸ್ವಚ್ಛ ವಾಹಿನಿ ಹಸ್ತಾಂತರ ಮಾಡಿದರು.
ಸ್ವಚ್ಛ ಸಂಕೀರ್ಣ ಘಟಕದಲ್ಲಿ ಕಸ ಸಂಗ್ರಹಣೆ, ವಿಂಗಡಣೆ ಮತ್ತು ವಿಲೇವಾರಿ ಮಾಡುವ ಹೊಣಗಾರಿಕೆಯ ಜವಾಬ್ದಾರಿಯನ್ನು ಸ್ವ ಸಹಾಯ ಸಂಘದ ಮಹಿಳೆಯರಿಗೆ ನೀಡಿದರು.
ಕಾರ್ಯಕ್ರಮದಲ್ಲಿ ಭೀಮಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಕೆ.ಕಾವ್ಯ, ಉಪಾಧ್ಯಕ್ಷ ಶರತ್ ಪಾಟೀಲ್, ಸದಸ್ಯರಾದ ರಮೇಶ್, ಉಮೇಶ್, ಲಿಂಗರಾಜು, ರಾಘವೇಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಲೀಂ, ಸಿಬ್ಬಂದಿ, ಸ್ವ-ಸಹಾಯ ಸಂಘದ ಮಹಿಳೆಯರು ಸಾರ್ವಜನಿಕರು ಇದ್ದರು.
[t4b-ticker]
+ There are no comments
Add yours