ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ.

 

ತುಮಕೂರು:  ಕಾಂಗ್ರೆಸ್ ಮುಖಂಡ  ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಜಯಚಂದ್ರಗೆ ಸಣ್ಣಪುಟ್ಟ  ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಮಂಗಳವಾರ ರಾತ್ರಿ ಫಾರ್ಚುನರ್ ಕಾರಿನಲ್ಲಿ ಟಿ.ಬಿ.ಜಯಚಂದ್ರ ಪ್ರಯಾಣಿಸುತ್ತಿದ್ದರು.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತುಮಕೂರು ತಾಲೂಕಿನ ಸಿಬಿ ಕ್ರಾಸ್​ ಬಳಿ ಚಾಲಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ  ಪಲ್ಟಿಯಾಗಿದೆ. ಪ್ರಾಣಾಪಾಯದಿಂದ ಜಯಚಂದ್ರ, ಕಾರು ಚಾಲಕ ಮತ್ತು ಗನ್ ಮ್ಯಾನ್ ಪಾರಾಗಿದ್ದಾರೆ. ಚಿಕಿತ್ಸೆಗೆ  ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

[t4b-ticker]

You May Also Like

More From Author

+ There are no comments

Add yours