ಈ ಬಾರಿ ನಮ್ಮ ಬಿಜೆಪಿ ಪಕ್ಷವು ನನಗೆ ಟಿಕೆಟ್ ನೀಡುತ್ತದೆ ಎಂಬ ವಿಶ್ವಾಸವಿದೆ

 

 ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಸ್ಪರ್ಧೆ ಮಾಡಲು ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಹಾಗೂ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾದ ಪ್ರಭಾಕರ ಮ್ಯಾಸನಾಯಕ ತಿಳಿಸಿದರು.
ಇತ್ತೀಚೆಗೆ ಚಿತ್ರದುರ್ಗದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕಳೆದ ಎರಡು ಅವಧಿಗಳಿಂದಲೂ ಕೂಡ ಭಾರತೀಯ ಜನತಾ ಪಾರ್ಟಿಯ ಸಾಮಾನ್ಯ ಕಾರ್ಯಕರ್ತನಾಗಿ ಕ್ಷೇತ್ರದಲ್ಲಿ ಸೇವಾ ಚಟುವಟಿಕೆಗಳ ಮೂಲಕ ನಿರಂತರವಾಗಿ ಕ್ಷೇತ್ರದ ಜನರೊಡನೆ ಇದ್ದೇನೆ .
ಕೋವಿಡ್ ಮಹಾ ಮಾರಿ ಜಗತ್ತನ್ನೇ ತಲ್ಲಣಗೊಳಿಸಿದಂತ ಸಮಯದಲ್ಲಿ ಜನರ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಪ್ರತಿ ಮನೆ ಮನೆಗೆ ಆಹಾರ ಸಾಮಗ್ರಿಗಳು ಹಾಗೂ ದಿನಸಿ ಪೊಟ್ಟಣಗಳನ್ನು ವಿತರಣೆ ಮಾಡಿ ಕ್ಷೇತ್ರದ ಜನರೊಡನೆ ಇದ್ದು ಕೆಲಸ ಮಾಡಿದ್ದೇನೆ.
 ಪ್ರತಿಷ್ಠಿತ ಖಾಸಗಿ ಕಂಪನಿಗಳಾದ ಮೈಕೋ. ವಿಪ್ರೋ, ಟೊಯೋಟಾ ಹಾಗೂ ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕ್ಷೇತ್ರದ ಸಾವಿರಾರು ಯುವಕರಿಗೆ ಉದ್ಯೋಗವನ್ನು ಕೊಡಿಸಿದ್ದೇನೆ.
 ಇದೇ ರೀತಿ ಆರೋಗ್ಯ ಕ್ಷೇತ್ರದಲ್ಲೂ ಕೂಡ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಬೆಂಗಳೂರಿನ ವಿಕ್ಟೋರಿಯಾ ಜಯದೇವ ಮಿಂಟೋ ಕಿಡ್ವಾಯಿ ಆಸ್ಪತ್ರೆಗೆ ಬರುವಂತ ರೋಗಿಗಳಿಗೆ ಸಹಾಯ ಮಾಡಿದ್ದೇನೆ.
 ಅನೇಕ ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಸೀಟ್ ಕೊಡಿಸಿ ಅವರ ಸಮಾಜಮುಖಿ ಬದುಕನ್ನು ರೂಪಿಸಿಕೊಳ್ಳಲು ಸಹಾಯ ಮಾಡಿದ್ದೇನೆ.
ಈ ಎಲ್ಲದರ ಹಿನ್ನೆಲೆಯಲ್ಲಿ ಹಾಗೂ ಮೊಳಕಾಲ್ಮುರು ಕ್ಷೇತ್ರದ ರೈತರ ನೇಕಾರರ ಹಾಗೂ ಬಡವರ ಕಲ್ಯಾಣಕ್ಕಾಗಿ ಕೆಲಸ ಮಾಡಿ ರಾಜ್ಯದಲ್ಲೇ ಒಂದು ಉತ್ತಮ ಕ್ಷೇತ್ರವನ್ನಾಗಿ ರೂಪಿಸಬೇಕೆಂಬ ಮಹದಾಸೆ ಹೊಂದಿದ್ದೇನೆ ಈ ನಿಟ್ಟಿನಲ್ಲಿ ಈಗಾಗಲೇ ಕೆಲಸ ಮಾಡುತ್ತಿದ್ದೇನೆ.
 ಈ ಬಾರಿ ನಮ್ಮ ಪಕ್ಷವು ನನಗೆ ಟಿಕೆಟ್ ನೀಡುತ್ತದೆ ಎಂಬ ಅದಮ್ಯ ವಿಶ್ವಾಸ ನನ್ನದಾಗಿದೆ ಕ್ಷೇತ್ರದ ಜನತೆಯು ಕೂಡ ನನ್ನ ಕೈ ಹಿಡಿದು ನಡೆಸುತ್ತಾರೆ ಎಂಬ ವಿಶ್ವಾಸ ನನ್ನದಾಗಿದೆ ಎಂದು ಪ್ರಭಾಕರ್ ತಿಳಿಸಿದರು.
 ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಲಿಂಗಾಯಿತ ಮಂಡಳಿಯ ಯುವ ವೇದಿಕೆಯ ರಾಜ್ಯ ಸದಸ್ಯ ಬಸವರಾಜ್, ಘಟಪರ್ತಿ ರಾಘವೇಂದ್ರ, ನವೀನ್ ಭಟ್ ಕುದಾಪುರ ಗ್ರಾಮದ ಮಂಜಣ್ಣ ಮಲ್ಲಿಕಾರ್ಜುನ್. ಗ್ರಾಮ ಪಂಚಾಯತಿ ಸದಸ್ಯ ಸ್ವಾಮಿ, ನರಸಯ್ಯ ನರಸಿಂಹಮುರ್ತಿ ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours