ಚಿತ್ರದುರ್ಗ: ಸಿಎಂ( Chief minister) ಸಿದ್ದರಾಮಯ್ಯ ಅವರನ್ನು ಟೀಕಿಸಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಚಿತ್ರದುರ್ಗದಲ್ಲಿ ಕಿಡಿಕಾರಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವರು ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ ಎಂದು ಪ್ರಶ್ನಿಸಿ, ಹುಚ್ಚನಂತೆ ರೀತಿಯಲ್ಲಿ ವರ್ತನೆ ಮಾಡುತ್ತಾನೆ. ನಾವು ಆ ರೀತಿ ಅಲ್ಲ, ನಾನು ಸಹ ಏಕವಚನ ಬಳಸಬಾರದು. ಆದರೆ ಅವನಿಗೆ ಯಾವ ಭಾಷೆ ಬಳಸಿದರೂ ಕೂಡ ಸಾಲದು ಎಂದು ಆಕ್ರೋಶ ಹೊರಹಾಕಿದರು.
ನಮ್ಮ ನಾಡಿನ ದೊರೆ ಮುಖ್ಯಮಂತ್ರಿ ಸಿದ್ದರಾಮಯ್ಯ. ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದವರು. ಜನ ಮೆಚ್ಚಿದ ಸಿದ್ದರಾಮಯ್ಯ ಬಗ್ಗೆ ಹಗುರವಾಗಿ ಮಾತಾಡ್ತಾನಲ್ಲ, ಅವನು ಮನುಷ್ಯನಾ ಎಂದು ಅನಂತ್ ಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದರು.
ಮುನಿಸ್ವಾಮಿ ವಿರುದ್ಧ ವಾಗ್ದಾಳಿ: ಕಾಂಗ್ರೆಸ್ ಸರ್ಕಾರ ಹಿಂಧೂ ಧರ್ಮ, ಶ್ರೀರಾಮನ ವಿರೋಧಿ ಎಂಬ ಬಿಜೆಪಿ ಸಂಸದ ಮುನಿಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಹಳಷ್ಟು ಜನ ಹಿಂದೂಗಳಿರುವುದೇ ಕಾಂಗ್ರೆಸ್ ಪಕ್ಷದಲ್ಲಿ. ಹಿಂದೂ ಧರ್ಮ, ರಾಮನ ಪೂಜೆ ಮಾಡುವವರು ಹೆಚ್ಚಿರುವುದು ಕಾಂಗ್ರೆಸ್ ಪಕ್ಷದಲ್ಲಿ. ರಾಮನ ಹೆಸರಿನಲ್ಲಿ ಮತಕ್ಕಾಗಿ ಮಾರ್ಕೆಂಟಿಂಗ್ ಮಾಡುವವರು ಕಾಂಗ್ರೆಸ್ಸಿಗರಲ್ಲ ಎಂದರು.
ಇದನ್ನೂ ಓದಿ: ಮಹಿಳಾ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ
ಕೋಟ್ಯಾಂತರ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮನಿದ್ದಾನೆ. ಆಂಜನೇಯನ ಹೃದಯದಲ್ಲಿ ರಾಮನಿದ್ದಂತೆ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮ. ನಾವು ರಾಮನ ವಿರೋಧಿ ಅಲ್ಲ, ಹಿಂದೂಗಳ ವಿರೋಧಿ ಅಲ್ಲ. ಹಿಂದೂಗಳ ಪರ, ಮುಸ್ಲಿಂರ ಪರ ಎಲ್ಲಾ ಧರ್ಮಗಳ ಜನರ ಪರವಿದ್ದೇವೆ ಎಂದು ಮಾಜಿ ಸಚಿವ ಆಂಜನೇಯ ಹೇಳಿದ್ದಾರೆ.
ಇದನ್ನೂ ಓದಿ: ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಆನಂದ್ ಲೋಕಯುಕ್ತ ಬಲೆಗೆ
[t4b-ticker]
+ There are no comments
Add yours