ಕಾಂಗ್ರೆಸ್ ಪಕ್ಷದಿಂದ ಮತ್ತೊಂದು ಗ್ಯಾರೆಂಟಿ ಯೋಜನೆ ಉಚಿತ 10 ಅಕ್ಕಿ

 

 

 

 

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷವು ತನ್ನ 3ನೇ ಭರವಸೆಯನ್ನು ರಾಜ್ಯದ ಜನತೆಗೆ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿಯನ್ನು ನೀಡುವುದಾಗಿ ಘೋಷಿಸಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಸಹ ಮಾಡಿ ಮಾಹಿತಿ ನೀಡಿರುವ ಸಿದ್ದರಾಮಯ್ಯ  ‘ಇದು ಕಾಂಗ್ರೆಸ್ ಪಕ್ಷದ ಮೂರನೇ ಗ್ಯಾರೆಂಟಿ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದ ಕೂಡಲೆ ರಾಜ್ಯದ ಬಡ ಕುಟುಂಬದ ಪ್ರತಿಯೊಬ್ಬ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ನಾವು ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದೆಯೂ ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ’ ಎಂದು ಹೇಳಿದ್ದಾರೆ.

 

 

ಇದು ಕಾಂಗ್ರೆಸ್ ಪಕ್ಷದ ಮೂರನೇ ಗ್ಯಾರೆಂಟಿ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದ ಕೂಡಲೆ ರಾಜ್ಯದ ಬಡಕುಟುಂಬದ ಪ್ರತೀ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ.

ನಾವು ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ,
ಮುಂದೆಯೂ ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ.

[t4b-ticker]

You May Also Like

More From Author

+ There are no comments

Add yours