ಚಿತ್ರದುರ್ಗ:ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಪರಿಷತ್ ಟಿಕೆಟ್ ಗೆ ಭಾರೀ ಪೈಪೋಟಿ ಏರ್ಪಟ್ಟಿದೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ ಅಷ್ಟೇನು ಪೈಪೋಟಿ ಇಲ್ಲದಿದ್ದರು ಸಹ ಹಾಲಿ ವಿಧಾನ ಪರಿಷತ್ ಸ್ಥಾನ ಬಿಜೆಪಿ ತೆಕ್ಕೆಯಲ್ಲಿದೆ. ಸದಸ್ಯ ವೈ. ಎ.ನಾರಾಯಣಸ್ವಾಮಿ ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಸದಸ್ಯರಾಗಿ ಸತತ ಗೆಲುವು ಸಾಧಿಸುತ್ತ ಬಂದಿದ್ದು ಈ ಬಾರಿ ಆಡಳಿತ ರೂಢ ಕಾಂಗ್ರೆಸ್ ಚುನಾವಣೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು ಶತಾಯಗತಾಯ ಗೆಲ್ಲಬೇಕು ಎಂಬ ಹುಮ್ಮಸಿನಲ್ಲಿದ್ದು ಯಾರು ಕಣಕ್ಕೆ ಇಳಿಯಲಿದ್ದಾರೆ ಎಂಬ ಚರ್ಚೆಗಳ ನಡೆವೆ ಹಲವು ಹೆಸರು ಕೇಳಿ ಬರುತ್ತಿದ್ದು ಇದರಲ್ಲಿ ಹೊಸ ಮಖ ಸಹ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಹಿರಿಯೂರು ಪೂರ್ಣಿಮಾ ಶ್ರೀನಿವಾಸ ಪತಿ ಶ್ರೀನಿವಾಸ್ ಕಾಂಗ್ರೆಸ್ ಸೇರಿ ಪರಿಷತ್ ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ.
ಚಿತ್ರದುರ್ಗ ಹಾಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಸಹೋದರ ಹಾಲಿ ಚಳ್ಳಕೆರೆ ನಗರಸಭೆ ಸದಸ್ಯ ಕೆ.ಸಿ.ನಾಗರಾಜ್ ಅವರು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿ ಎಂಬ ಬ್ಯಾನರ್ ಗಳು ಹವಾ ಜೋರಾಗಿದೆ. ಚಿತ್ರದುರ್ಗದಲ್ಲಿ ತಮ್ಮನ ಒಂದಿಷ್ಟು ಜವಬ್ದಾರಿ ನಿರ್ವಹಿಸುತ್ತಿರುವ ಕೆ.ಸಿ.ನಾಗರಾಜ್ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಮೇಲೆ ಕಣ್ಣಿಟ್ಟಿದ್ದು ಟಿಕೆಟ್ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
[t4b-ticker]
+ There are no comments
Add yours