ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ

 

ಚಿತ್ರದುರ್ಗ ಕರ್ನಾಟಕ ವಾರ್ತೆ ಜುಲೈ 26:
ಪ್ರಸಕ್ತ ಸಾಲಿಗೆ ಕೇಂದ್ರ ಸರ್ಕಾರದ  ನ್ಯಾಷನಲ್ ಇ-ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ www.scholarship.gov.in   ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳಿಗೆ ಸೆಪ್ಟಂಬರ್ 30 ಹಾಗೂ ಪೋಸ್ಟ್–ಮೆಟ್ರಿಕ್, ಟಾಪ್ ಕ್ಲಾಸ್ ವಿದ್ಯಾರ್ಥಿಗಳಿಗೆ ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿಯ ಒಂದು ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ಅಥವಾ ಯು.ಆರ್.ಡಬ್ಲ್ಯೂ ರವರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ ಅಥವಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ದೂರವಾಣಿ ಸಂಖ್ಯೆ 08194-235284ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿüಕಾರಿ ಜೆ. ವೈಶಾಲಿ  ತಿಳಿಸಿದ್ದಾರೆ

[t4b-ticker]

You May Also Like

More From Author

+ There are no comments

Add yours