ನಿರುದ್ಯೋಗ ಮತ್ತು ಅರೆ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗಕ್ಕೆ ಅರ್ಜಿ‌ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್ 9:
ನಾಯಕನಹಟ್ಟಿ ನಗರದಲ್ಲಿ ವಾಸವಾಗಿರುವ ನಿರುದ್ಯೋಗ ಮತ್ತು ಅರೆ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜುಲೈ 2 ಅರ್ಜಿ ಸಲ್ಲಿಸಲು ಕೊನೆಯ ದಿನ.
ಕೇಂದ್ರ ಸರ್ಕಾರದ ಯೋಜನೆಯಾದ ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ನಾಯಕನಹಟ್ಟಿ ಪಟ್ಟಣಪಂಚಾಯಿತಿಗೆ ಸಂಬಂಧಿಸಿದಂತೆ 2022-23ನೇ ಸಾಲಿಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ, ಅಭಿಯಾನ ನಿರ್ದೇಶಕರು ಮೇ 18ರಂತೆ ಭೌತಿಕ ಮತ್ತು ಆರ್ಥಿಕ ಗುರಿಯನ್ನು ಸ್ಥಳಿಯ ಸಂಸ್ಥೆಗೆ ನಿಗದಿ ಪಡಿಸಿರುತ್ತಾರೆ. ಪಟ್ಟಣ ಪಂಚಾಯಿತಿ ನಾಯಕನಹಟ್ಟಿಗೆ ಸ್ವಯಂ ಉದ್ಯೋಕ್ಕಾಗಿ 4 ಭೌತಿಕ ಗುರಿಯನ್ನು ಮತ್ತು ಸ್ವಸಹಾಯ ಸಂಘ ಕ್ರೇಡಿಟ್ ಲಿಂಕೇಜ್‍ಗಾಗಿ 4 ಗುರಿಯನ್ನು ನಿಗಧಿಪಡಿಸಿರುತ್ತಾರೆ.
ಆಸಕ್ತಿಯುಳ್ಳ ಫಲಾನಿಭವಿಗಳು ಅರ್ಜಿಗಳನ್ನು ಪಟ್ಟಣ ಪಂಚಾಯಿತಿ, ಡೇನ್ಮಾಲ್ ಶಾಖೆಯಲ್ಲಿ ಪಡೆದು ಸಲ್ಲಿಸಬಹುದಾಗಿದೆ. ಅರ್ಜಿಯೊಂದಿಗೆ ಬಿಪಿಎಲ್ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಆದಾಯ ಮತ್ತು ಜಾತಿ ಪ್ರಮಾಣಪತ್ರ, ವ್ಯಾಪಾರದ ಯೋಜನಾವರದಿ, ಭಾವಚಿತ್ರ ದ್ವಿಪ್ರತಿಯಲ್ಲಿ ಅರ್ಜಿಯನ್ನು ಜುಲೈ 2ರೊಳಗಾಗಿ ಸಲ್ಲಿಸಬೇಕು ಎಂದು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours