ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.8:
ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಓದಿ: ಉದ್ಯೋಗ: ನೇರ ನೇಮಕಾತಿ ಸಂದರ್ಶನ

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್   15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

ನೀವು ಓದಿ:ವಿಕಲಚೇತನರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

[t4b-ticker]

You May Also Like

More From Author

+ There are no comments

Add yours