ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

 

ಚಿತ್ರದುರ್ಗ:ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆ,ಎಸ್ಸೆಸ್ಸೆಲ್ಸಿಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಅಧಿಕ ಅಂಕ ಪಡೆದು ಉತ್ತೀರ್ಣರಾದ ಜಿಲ್ಲೆಯ ಜಂಗಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನಗರದಲ್ಲಿ ಏರ್ಪಡಿಸಿದೆ. ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 10ರೊಳಗೆ ನಗರದ ಮೆದೇಹಳ್ಳಿ ರಸ್ತೆ,ಅಗ್ನಿಶಾಮಕ ದಳದ ಕಚೇರಿ ಬಳಿ, ಕೆವಿಆರ್ ಕಾಂಪ್ಲೆಕ್ಸ್‌ನಲ್ಲಿರುವ ಸಂಸ್ಥೆ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಸದ್ಯದಲ್ಲೇ ನಿಗದಿಯಾಗಲಿರುವ ಸಮಾರಂಭದಲ್ಲಿ ಪದವಿ,ಸ್ನಾತ ಕೋತ್ತರ ಪದವಿಗಳಲ್ಲಿ ರ‌್ಯಾಂಕ್,ಅತ್ಯುನ್ನತ ಶ್ರೇಣಿಗಳನ್ನು ಪಡೆದ ಮ ತ್ತು ಡಾಕ್ಟರೇಟ್ ಪಡೆದ ಜಂಗಮ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9449681797ನ್ನು ಸಂಪರ್ಕಿಸುವಂತೆ ಸಂಸ್ಥೆ ಪ್ರಧಾನ ಕಾರ‌್ಯದರ್ಶಿ ಎಸ್.ಷಡಾಕ್ಷರಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours