ಚಿತ್ರದುರ್ಗ: 2022-23ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.75 ಹಾಗೂ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿಎಸ್.ಡಬ್ಲ್ಯೂ, ಇಂಜಿನಿಯರಿಂಗ್, ಎಂ.ಬಿ.ಬಿ.ಎಸ್, ಇತರೆ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿದ, ಪಿ.ಹೆಚ್.ಡಿ ಪದವಿ ಪಡೆದ, ಐ.ಎ.ಎಸ್, ಐ.ಪಿ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ಚಿತ್ರದುರ್ಗ ಜಿಲ್ಲೆಯ ನಾಯಕ ಸಮಾಜದ(Nayaka samaja) ಪ್ರತಿಭಾನ್ವಿತರನ್ನು ಅಭಿನಂದಿಸಲು ಚಿತ್ರದುರ್ಗ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ನಾಯಕ ಸಮಾಜದ ಪ್ರತಿಭಾನ್ವಿತರು 2023ರ ನವೆಂಬರ್ 10 ರೊಳಗೆ ನಾಗೇಂದ್ರ ಬಾಬು, ಕಾರ್ಯದರ್ಶಿ, ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶಾಂತಿನಗರ, ಕಾರ್ತಿಕ್ ಪೆಟ್ರೋಲ್ ಬಂಕ್ ಹತ್ತಿರ, #73/3, ಚಿತ್ರದುರ್ಗ, ಮೊಬೈಲ್ 7483639318 ವಿಳಾಸಕ್ಕೆ ತಮ್ಮ ಸ್ವ-ವಿವರದ ಅರ್ಜಿಯ ಜೊತೆ ಪೂರಕ ದಾಖಲಾತಿಗಳೊಂದಿಗೆ ಅಂಚೆ ಮೂಲಕ ಇಲ್ಲವೇ ನೇರವಾಗಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಡಾ.ಹೆಚ್.ಗುಡ್ಡದೇಶ್ವರಪ್ಪ, ಅಧ್ಯಕ್ಷರು, ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ), ಮದಕರಿ ವೃತ್ತ, ಚಿತ್ರದುರ್ಗ-577501, ಮೊಬೈಲ್ ನಂಬರ್: 9448232934 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
========
ಹೆಚ್ಚಿನ ಮಾಹಿತಿಗಾಗಿ ಡಾ.ಹೆಚ್.ಗುಡ್ಡದೇಶ್ವರಪ್ಪ, ಅಧ್ಯಕ್ಷರು, ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ), ಮದಕರಿ ವೃತ್ತ, ಚಿತ್ರದುರ್ಗ-577501, ಮೊಬೈಲ್ ನಂಬರ್: 9448232934 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
========
+ There are no comments
Add yours