ಅರ್ಜಿ ಆಹ್ವಾನ
*********
ಚಿತ್ರದುರ್ಗ ( ಕರ್ನಾಟಕ ವಾರ್ತೆ ) ಜುಲೈ 28:
2021-22 ಮತ್ತು 2022-23ನೇ ವರ್ಷದ ಅವಧಿಯಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್ಡಿ ಕೋರ್ಸ್ಗೆ ನೋಂದಣಿ ಮಾಡಿಕೊಂಡಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 16 ಅರ್ಜಿ ಸಲ್ಲಿಸಲು ಕೊನೆಯ ದಿನ.
ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು https:sevasindhuservices.
ಅರ್ಹತೆಗಳು : ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಯು ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಯು ಪೂರ್ಣಾವಧಿ ಕೋರ್ಸ್ಗೆ ಎನ್ರೊಲ್ ಮಾಡಿರಬೇಕು. ವಿದ್ಯಾರ್ಥಿಯ ಪಾಲಕರ ಅಥವಾ ಪೋಷಕರ ವಾರ್ಷಿಕ ಆದಾಯ ರೂ.8 ಲಕ್ಷ ಮೀರಿರಬಾರದು. ಗರಿಷ್ಠ ವಯೋಮಿತಿ 35 ವರ್ಷಗಳು, ವಿದ್ಯಾರ್ಥಿಯು ಯಾವುದೇ ಸರ್ಕಾರಿ ಉದ್ಯೋಗಿಯಾಗಿರಬಾರದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
[t4b-ticker]
+ There are no comments
Add yours