ಬೈಕ್ ಅಡ್ಡ ಬಂದ ಪರಿಣಾಮ ಸಿಎಂ ಎಸ್ಕರ್ಟ್ ವಾಹನ ಪಲ್ಟಿ

 

ತ್ರದುರ್ಗ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾಗಿರೋ ಘಟನೆ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದೆ.

ವಾಣಿ ವಿಲಾಸ ಡ್ಯಾಂನಿಂದ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಬರುವ ವೇಳೆ ಬೈಕ್ ಒಂದು ಅಡ್ಡ ಬಂದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಕೂಡಲೇ ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಎಂ ಎಸ್ಕಾರ್ಟ್ ವಾಹನದಲ್ಲಿ ಸಿಪಿಐ ರಮಾಕಾಂತ್ ಸೇರಿ ಹಲವರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

[t4b-ticker]

You May Also Like

More From Author

+ There are no comments

Add yours