ಚಿತ್ರದುರ್ಗ: (ಕರ್ನಾಟಕ ವಾರ್ತೆ) ಅಕ್ಟೋಬರ್ 19:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಧನ್ವಂತರಿ ಜಯಂತಿ ಅಂಗವಾಗಿ 7ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಉಚಿತ ಆಯುಷ್ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 23ರಂದು ಬೆಳಿಗ್ಗೆ 10.30ಕ್ಕೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಹೊರಮಠ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಘನ ಉಪಸ್ಥಿತಿವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಆಹ್ವಾನಿತರಾಗಿ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಗೂಳಿಹಟ್ಟಿ ಡಿ.ಶೇಖರ್, ಪೂರ್ಣಿಮಾ ಕೆ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಆಯುಷ್ ಇಲಾಖೆಯ ಆಯುಕ್ತ ರಾಮಚಂದ್ರ, ಉಪನಿರ್ದೇಶಕಿ ಅನುರಾಧ ಚಂಚಲ್ಕರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಉಪಸ್ಥಿತಿ ಇರುವರು ಎಂದು ಪ್ರಕಟಣೆ ತಿಳಿಸಿದೆ.
[t4b-ticker]
+ There are no comments
Add yours