ಬೆಂಗಳೂರು, ಜನವರಿ 18: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ (Chief minister) ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2024 ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಸವಣ್ಣನವರ ಹೆಸರು ಚಿರಸ್ಥಾಯಿಯಾಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.
*ಅಲ್ಲಮಪ್ರಭು ಉದ್ಯಾನವನ*
ಶಿವಮೊಗ್ಗದಲ್ಲಿರುವ ಜೈಲಿನ 46 ಎಕರೆ ಪ್ರದೇಶದಲ್ಲಿ ಉದ್ಯಾನವನಕ್ಕೆ ಅಲ್ಲಮಪ್ರಭು ಉದ್ಯಾನವನ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅಲ್ಲಮಪ್ರಭು ಹಾಗೂ ಅಕ್ಕಮಹಾದೇವಿ ಶಿಕಾರಿಪುರದವರಾದ್ದರಿಂದ ಅವರ ಹೆಸರನ್ನೂ ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದರು.
*ತೋಟಗಾರಿಕೆ ಇಲಾಖೆಯ ಆಗಿರುವ ಬೆಳವಣಿಗೆಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ*
ತೋಟಗಾರಿಕೆ ಇಲಾಖೆಯವರು ಬೆಳೆಯುವ ಹೂ, ಹಣ್ಣುಗಳು,ಇಲಾಖೆಯಲ್ಲಿ ಆಗಿರುವ ಬೆಳವಣಿಗೆಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ ಇದು. ಎಂದ ಮುಖ್ಯಮಂತ್ರಿಗಳು ತೋಟಗಾರಿಕೆ ಇಲಾಖೆಗೆ ಧನ್ಯವಾದಗಳನ್ನು ಹೇಳಿದರು.
*ಬಸವಾದಿ ಶರಣರ ಸಂದೇಶ ಸಾರುವ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ :*
ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಇಂದು ಉದ್ಘಾಟಿಸಲಾಗಿದೆ. ಬಸವಾದಿ ಶರಣರ ವಚನ ಸಾಹಿತ್ಯ ಆಧಾರಿತವಾದ ಫಲಪುಷ್ಪ ಪ್ರದರ್ಶನ ಈ ಬಾರಿಯ ವಿಶೇಷತೆ. ಹನ್ನರಡನೆಯ ಶತಮಾನದಲ್ಲಿ ಜಾತಿರಹಿತ ಹಾಗೂ ಮೂಡನಂಬಿಕೆ ಕಂದಾಚಾರಗಳಿಂದ ಮುಖ್ತವಾದ ಸಮ ಸಮಾಜ ನಿರ್ಮಾಣ ಮಾಡಲು ಹೋರಾಟ ನಡೆಸಲಾಗಿತ್ತು. ಈ ವಚನ ಚಳವಳಿಯ ಬಗ್ಗೆ ಜನರಿಗೆ ಪ್ರಚುರಪಡಿಸಲು ಉದ್ದೇಶದಿಂದ ಈ ಬಾರಿಯ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಹಲವಾರು ಬಗೆಯ ಫಲಪುಷ್ಪಗಳ ಮೂಲಕ ಬಸವಾದಿ ಶರಣರ ಸಂದೇಶಗಳನ್ನು ಪ್ರಚುರಪಡಿಸಲಾಗುತ್ತಿದೆ.
ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಇಂದಿನಿಂದ 28 ನೇ ಜನವರಿ ವರೆಗೆ ಪ್ರದರ್ಶನ ನಡೆಯಲಿದ್ದು, ತೋಟಗಾರಿಕೆ ಇಲಾಖೆ ಮಾಡಿಕೊಟ್ಟಿರುವ ಈ ಅವಕಾಶವನ್ನು ಬೆಂಗಳೂರಿನ ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕು. ತೋಟಗಾರಿಕಾ ಇಲಾಖೆಯವರಿಂದ ವಿವಿಧ ಫಲ ಪುಷ್ಪಗಳನ್ನು ಬೆಳೆಯಲಾಗುತ್ತದೆ ಎಂಬ ವಿಸ್ತೃತ ಮಾಹಿತಿಯನ್ನು ಜನರು ಪಡೆಯಬಹುದಾಗಿದೆ ಎಂದರು.
[t4b-ticker]
+ There are no comments
Add yours