ಮುಂಗಾರು ಪ್ರಾರಂಭವಾಗಿದ್ದು ರೈತರಿಗೆ ಬೀಜ ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಶಾಸಕ ಟಿ.ರಘುಮೂರ್ತಿ ಸೂಚನೆ

 

 

 

 

ಚಳ್ಳಕೆರೆ-06: ಮುಂಗಾರು ಪ್ರಾರಂಭವಾಗಿ ರೈತರು ಭೂಮಿಯನ್ನು ಹದಗೊಳಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಗತ್ಯವಿರುವ  ಬೀಜ, ಗೊಬ್ಬರ, ಸಲಹೆ ಸೂಚನೆಗಳನ್ನು ಅಧಿಕಾರಿಗಳು ನೀಡಬೇಕೆಂದು ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು `2022-23ನೇ ಸಾಲಿನ ಕೃಷಿ ಅಭಿಯಾನ, ಮಾಹಿತಿ ರಥ ಚಾಲನೆ ನೀಡಿ ಮಾತನಾಡಿದರು. ಮುಂಗಾರು ಹಂಗಾಮಿನ ಬಿತ್ತನೆ ಬೀಜ ಸರಿಯಾದ ಸಮಯಕ್ಕೆ ರೈತರಿಗೆ ನೀಡಿ ಬಿತ್ತನೆ ಅವುಗಳ ಪೋಷಣೆಯ ಬಗ್ಗೆ ಮಾಹಿತಿ ನೀಡಬೇಕು ಎಂದರು.
ರೈತ ಹಾಗೂ ಕೃಷಿ ದೇಶದ ಬೆನ್ನುಲುಬು. ರೈತನಿಲ್ಲದಿದ್ದರೆ ನಾವು ಬದುಕಲು ಸಾಧ್ಯವಿಲ್ಲ. ಇಂದು ನಾವು ತಿನ್ನುವ ಪ್ರತಿಯೊಂದು ತುತ್ತಿನ ಹಿಂದೆ ರೈತನ ಶ್ರಮವಿದೆ. ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದೆ.
ಈ ಸಂದರ್ಭದಲ್ಲಿ ಕೃಷಿ ಅಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರವಿಕುಮಾರ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಗಿರಿಯಪ್ಪ, ನಗರಸಭೆ ಸದಸ್ಯ ರಾಘವೇಂದ್ರ ಹಾಗೂ ರೈತರು, ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು

 

 

[t4b-ticker]

You May Also Like

More From Author

+ There are no comments

Add yours