ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ ಜು.1 ರಂದು ಸಂಜೆ 3 ಗಂಟೆಗೆ ಮನೆಯ ಪಕ್ಕದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



