ಚಿತ್ರದುರ್ಗ:ರಾಜ್ಯ ಬಿಜೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾದ ಮೇಲೆ ಯುವ ಸಮೂಹಕ್ಕೆ ಮಣೆ ಹಾಕುವ ಜೊತೆ ಸಂಘಟನೆ ಒತ್ತು ನೀಡುತ್ತಿದ್ದಾರೆ. ಅದರಂತೆ ಇಂದು ಚಿತ್ರದುರ್ಗದ ಹಲವು ಹೋರಟಗಳಲ್ಲಿ ಮುಂಚೂಣಿ ನಾಯಕಿಯಾಗಿದ್ದ ಯುವ ನಾಯಕಿ ಭಾರ್ಗವಿ ದ್ರಾವಿಡ್ ( bhargavidravid) ಅವರನ್ನು ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಆದೇಶ ಹೊರಡಿಸಿದೆ.
ಇಂದು ಜ ಬೆಂಗಳೂರಿನ ಜೆಪಿ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾರ್ಗವಿ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜ್ ಅವರು ಆದೇಶ ಮಾಡಿದ್ದರು. ಈ ನೇಮಕಗೊಂಡ ಪತ್ರವನ್ನು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಭಾರ್ಗವಿ ದ್ರಾವಿಡ್ ಅವರಿಗೆ ನೀಡಿದ್ದಾರೆ.
ಇದನ್ನೂ ಓದಿ: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ:ಸಿಎಂ ಸಿದ್ದರಾಮಯ್ಯ
ಚಿತ್ರದುರ್ಗ ಜಿಲ್ಲೆಯಲ್ಲಿ ಯುವಕರ ಜೊತೆ ಅನೇಕ ಹೋರಟಗಳಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಿದ್ದರು. ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಲಾಗಿತ್ತು. ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎಬಿವಿಪಿ ಕಾರ್ಯಕರ್ತೆಯಾಗಿ ಜಿಲ್ಲೆ, ರಾಜ್ಯ ಮಟ್ಟದ ಜವಾಬ್ದಾರಿ ನಿರ್ವಹಿಸಿದ್ದ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದರು.
[t4b-ticker]
+ There are no comments
Add yours