ಸಾವಿರಾರು ಬೆಂಬಲಿಗರ ಜೊತೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಕೆ

 

ಚಳ್ಳಕೆರೆ-20 ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆರ್.ಅನಿಲ್ ಕುಮಾರ್ ಗುರುವಾರ ಸಾವಿರಾರು ಬೆಂಬಲಿಗರೊಂದಿಗೆ ತಾಲ್ಲೂಕು ಕಚೇರಿಗೆ ಆಗಮಿಸಿ ತಮ್ಮ ಉಮೇದೂವಾರಿಕೆ ಸಲ್ಲಿಸಿದರು.

ನಗರದ ಸಾಯಿಮಂದಿರ, ಚಳ್ಳಕೆರೆಯಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರಟ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ‌‌ ಸಾಗಿತು. ನೆಹರು ವೃತ್ತದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಳ್ಳಾರಿ ಸಂಸದ ದೇವೇಂದ್ರಪ್ಪ, ಡಬಲ್‌ಇಂಜಿನ್ ಸರ್ಕಾರದಲ್ಲಿ ಬಡ ಜನರ ಅಭಿವೃದ್ಧಿ ಹಲವಾರು ಯೋಜನೆ ರೂಪಿಸುವ ಮೂಲಕ ಜನರ‌ ಕಲ್ಯಾಣಕ್ಕೆ ಹೆಚ್ಚು ಶ್ರಮಿಸಿದೆ. ಕಲ್ಯಾಣ ಕರ್ನಾಟಕ ಮಾಡುವ ಉದ್ದೇಶದಿಂದ ನೂರಾರು ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಿವೆ.‌ ಮೋದಿಯವರ ಹಲವಾರು ಜನಪ್ರಿಯ ಯೋಜನೆಗಳು ಪಕ್ಷದ ಗೆಲುವಿಗೆ ನಾಂದಿಯಾಗಲಿವೆ ಎಂದರು.‌
ಅಭ್ಯರ್ಥಿ ಆರ್.ಅನಿಲ್ ಕುಮಾರ್ ಮಾತನಾಡಿ, ಕಳೆದ ಹತ್ತು  ವರ್ಷಳಿಂದ ಕಾಣದ ಅಭಿವೃದ್ಧಿ ಮಾಡುವ ಉದ್ದೇಶದಿಂದ ನಾನು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆನೆ. ಇಂದು ನಡೆದ ರ್ಯಾಲಿಯಲ್ಲಿ‌ ಭಾಗವಹಿಸಿರುವ ಜನರ ಉತ್ಸಾಹ ಕಂಡರೆ ವಿಧಾನಸಭಾ ಚುನಾವಣೆಯಲ್ಲಿ 20ಸಾವಿರ ಲೀಡ್‌ನಲ್ಲಿ ಜಯಭೇರಿ ಬಾರಿಸುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಮಂಡಲಾ ಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಜಿಲ್ಲಾ ಉಪಾಧ್ಯಕ್ಷ ಬಾಳೆಕಾಯಿ ರಾಮದಾಸ್, ಮಾಜಿ ಎಪಿಎಂಸಿ ಅಧ್ಯಕ್ಷ ಸೋಮಶೇಖರ್ ಮಂಡಿಮಠ್, ಮಂಡಲದ ಎಲ್ಲಾ ತರದ ಪದಾಧಿಕಾರಿಗಳು, ಪ್ರಮುಖರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಈ ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

[t4b-ticker]

You May Also Like

More From Author

+ There are no comments

Add yours