ಮೊಳಕಾಲ್ಮುರು:molakalmuru ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯನ್ನು ಕಂಡು ಬಿಜೆಪಿಗೆ ನಡುಕ ಶುರುವಾಗಿದೆ. ಬಿಜೆಪಿ ನಾಯಕರು ಭಯದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಯಾತ್ರಗೂ ಪ್ರಾರಂಭಕ್ಕೂ ಮೊದಲು ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ನನ್ನನ್ನು ಕಂಡರೆ ಬಿಜೆಪಿ ನಾಯಕರಿಗೆ ಭಯ. ಬಲಶಾಲಿಯಾದವರಿಗೆ ಶತ್ರುಗಳು ಹೆಚ್ಚು. ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಟ್ಟು ವಿಷಯಾಧಾರಿತ ಚರ್ಚೆಗೆ ಬನ್ನಿ. ವ್ಯಾಪಕವಾಗಿರುವ ಭಷ್ಟಾಚಾರದ ಕುರಿತು ಮಾತನಾಡಿ’ ಎಂದರು. Rahul Gandhi
ಕ್ಲಿಕ್ ಮಾಡಿ ಓದಿ: ಸರ್ಕಾರ ದುರ್ಗೋತ್ಸವ ಮಾಡುವ ಮೂಲಕ ಮದಕರಿನಾಯಕ ಸ್ಮರಣೆ ಮಾಡಬೇಕಿದೆ: ಬಿ.ಕಾಂತರಾಜ್
‘ಕಾಂಗ್ರೆಸ್ ನಾಯಕರಲ್ಲಿ ಹೊಂದಾಣಿಕೆ ಇಲ್ಲ ಎಂಬುದು ಯಾರು ಹೇಳಿದ್ದು? ಬಸವನಗೌಡ ಪಾಟೀಲ್ ಯತ್ನಾಳ ಹಾಗೂ ಎಚ್.ವಿಶ್ವನಾಥ್ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ನೋಡಿದರೆ ಎಲ್ಲ ಅರ್ಥವಾಗುತ್ತದೆ. ಯಡಿಯೂರಪ್ಪ ಅವರನ್ನು ಬಿಟ್ಟರೆ ಬಿಜೆಪಿ ಪ್ರಚಾರಕ್ಕೆ ಹೋಗಲು ಸಾಧ್ಯವಿಲ್ಲ. sidhramiah ಯಡಿಯೂರಪ್ಪ ಬಿಟ್ಟು ಅವರಿಗೆ ಬೇರೆ ನಾಯಕರೇ ದಿಕ್ಕಿಲ್ಲ’ ಎಂದು ಪ್ರಶ್ನೆಗೆ ಉತ್ತರಿಸಿದರು.
[t4b-ticker]
+ There are no comments
Add yours