ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಇಂದು ದೇವರಾಜ ಅರಸು ಹಿಂದುಳಿದ ವರ್ಗ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ ಮಾಡಿ, ಹಸಿ ತರಕಾರಿಯ ಮಹತ್ವದ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡುವುದರ ಮೂಲಕ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಭಾಜಪ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣ, ತಾಲೂಕು ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಕೋಶಾಧಿಕಾರಿ ಶ್ರೀಮತಿ ಸಂಗೀತ ಅರುಣ್ ಶೆಟ್ಟಿ, ಸಿಬ್ಬಂದಿ ವರ್ಗ ಮತ್ತು ಮಕ್ಕಳು ಉಪಸ್ಥಿತರಿದ್ದರು.



