ಬಿಜೆಪಿಯ ಸೋಲು ಮೋದಿಯವರ ಸೋಲಲ್ಲ:ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ

 

ಕರ್ನಾಟಕದಲ್ಲಿ ಬಿಜೆಪಿಯ ಸೋಲು ಮೋದಿಯವರ ಸೋಲಲ್ಲ. ಇಲ್ಲಿ ಅವರು ಪಕ್ಷದ ಪರವಾಗಿ ಪ್ರಚಾರಕಷ್ಟೇ ಬಂದಿದ್ದರು’ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ನಾಯಕತ್ವ ಇಡೀ ದೇಶದಲ್ಲಿ ಸೋತಿದೆ.

ಕರ್ನಾಟಕದಲ್ಲಿ ಮಾತ್ರ ಗೆದ್ದಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮೋದಿಯವರು ರಾಷ್ಟ್ರೀಯ ನಾಯಕರು. ಇಲ್ಲಿಗೆ ಪ್ರಚಾರಕ್ಕೆ ಬಂದಿದ್ದರು. ಇದು ಅವರ ಸೋಲು ಎನ್ನುವುದು ಸರಿಯಲ್ಲ ಎಂದು ಹೇಳಿದರು.

‘ಪಕ್ಷದ ಕಚೇರಿಯಲ್ಲಿ ಎಲ್ಲ ಪ್ರಮುಖರು ಸೇರಿ ಫಲಿತಾಂಶದ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಫಲಿತಾಂಶದ ಬಗ್ಗೆ ಬೇರೆ ಬೇರೆ ಕಡೆಯಿಂದ ಇನ್ನಷ್ಟು ಮಾಹಿತಿ ತರಿಸಿಕೊಂಡು ಚರ್ಚೆ ಮಾಡುತ್ತೇವೆ. ಒಟ್ಟಾರೆ ಫಲಿತಾಂಶದ ಬಗ್ಗೆ ವಿಧಾನಸಭಾ ಕ್ಷೇತ್ರವಾರು ಪರಾಮರ್ಶೆ ಮಾಡಬೇಕಿದೆ’ ಎಂದು ಹೇಳಿದರು.

‘ನಮ್ಮ ಅಧ್ಯಕ್ಷರು ಇನ್ನು ಮೂರು ನಾಲ್ಕು ದಿನಗಳಲ್ಲಿ ಚುನಾಯಿತ ಪ್ರತಿನಿಧಿಗಳ ಸಭೆ ಕರೆಯುತ್ತಾರೆ. ಮರುದಿನ ಎಲ್ಲ ಅಭ್ಯರ್ಥಿಗಳ ಸಭೆ ಕರೆದು ಚರ್ಚೆ ಮಾಡಲಿದ್ದು, ಅಲ್ಲಿ ಕೂಲಂಕಷವಾಗಿ ಚರ್ಚೆ ಮಾಡುತ್ತೇವೆ. ಯಾವ ರೀತಿ ಒಗ್ಗಟ್ಟಾಗಿ ಪಕ್ಷ ಬಲವರ್ಧನೆ ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ನಾವು ವಿಶ್ರಮಿಸುವುದಿಲ್ಲ. ಲೋಕಸಭೆಗೆ ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

[t4b-ticker]

You May Also Like

More From Author

+ There are no comments

Add yours