ನವದೆಹಲಿ: ದೆಹಲಿ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ಸಾಧ್ಯತೆ ಕಡಿಮೆ ಇದ್ದು, ಸದ್ಯ ಕೇಂದ್ರದ ಯಾವುದೇ ಸಚಿವರನ್ನೂ ಭೇಟಿಯಾಗಿಲ್ಲ ಎಂದು ಸಿಎಂ ತಿಳಿಸಿದರು.
ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ದೆಹಲಿ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ. ಹಾಗಾಗಿ ದೆಹಲಿಗೆ ಬಂದಿದ್ದೇನೆ, ಈ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತ ಮಾತುಕತೆ ಸಾಧ್ಯತೆ ಕಡಿಮೆ ಇದೆ. ಸದ್ಯ ಕೇಂದ್ರದ ಯಾವುದೇ ಸಚಿವರನ್ನೂ ಭೇಟಿಯಾಗಿಲ್ಲ. ಈ ಪ್ರವಾಸದ ವೇಳೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದಿಲ್ಲ ಎಂದು ತಿಳಿಸಿದರು.
[t4b-ticker]
+ There are no comments
Add yours