ಡಿವೈಡರ್​ಗೆ ಕಾರು ಡಿಕ್ಕಿ, ಪೊಲೀಸರಿಗೆ ಗಾಯ.

 

ಚಿತ್ರದುರ್ಗ : ಪೋಲಿಸ್ ಪೇದೆಗಳು ಪ್ರಾಯಣಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಪೋಲಿಸ್ ಪೇದೆಗಳು ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸಿದ್ದಾಪುರ ಗ್ರಾಮ ಬಳಿ ಘಟನೆ ನಡೆದಿದ್ದು ಗಾಯಗೊಂಡ ಪೋಲಿಸರನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣೆಯ ಮಂಜುನಾಥ್, ಶ್ರೀನಿವಾಸ್, ನರೇಶ್ ಪೊಲೀಸ್ ಪೇದೆಗಳು ಎಂದು ಗುರುತಿಸಲಾಗಿದೆ.

ಲಾರಿ ಓವರ್ ಟೆಕ್ ಮಾಡಲು ಹೋಗಿ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ಪೊಲೀಸರು ಬೆಂಗಳೂರಿನಿಂದ ಬಳ್ಳಾರಿಗೆ ಕೇಸ್ ಒಂದನ್ನು ತನಿಖೆ ನಡೆಸಲು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಇನ್ನು ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಪ್ರಕರಣ ದಾಖಲಿಸಿಕೊಂಡಿರುವ ರಾಂಪುರ ಪೊಲೀಸರು ತನಿಖೆ ಕೈಗೊಂಡಿದ್ದು, ರಾಂಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

[t4b-ticker]

You May Also Like

More From Author

+ There are no comments

Add yours