ಜಿಲ್ಲೆಯಲ್ಲಿ 5 ಸಾವಿರ ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ -ಡಾ.ಆರ್.ರಂಗನಾಥ

 

 

 

 

ಚಿತ್ರದುರ್ಗ (chitrdaurga) ಅಕ್ಟೋಬರ್ 13:
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ ಕಣ್ಣಿನ ಪರೀಕ್ಷೆಯ ಸಮೀಕ್ಷೆ ಮೂಲಕ ದೃಷ್ಠಿ ದೋಷ ಪತ್ತೆ ಹಚ್ಚುವ ಕಾರ್ಯ ಮಾಡಲಾಗುತ್ತಿದೆ. 9 ಸಾವಿರ ವಕ್ರೀಕಾರಕ ದೋಷವಿರುವ ಹಾಗೂ 9 ಸಾವಿರಕ್ಕೂ ಅಧಿಕ ಕಣ್ಣಿನ ಪೊರೆ ದೋಷವಿರುವ ಜನರನ್ನು ಪತ್ತೆ ಹಚ್ಚಿಲಾಗಿದೆ. ಇದರಲ್ಲಿ 5 ಸಾವಿರ ಜನರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದೇ ರೀತಿ ಬೇರೆ ದೋಷಗಳನ್ನು ಕೂಡ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆ ಆವರಣದ ಬಿ.ಸಿ.ರಾಯ್ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ ‘ವಿಶ್ವ ದೃಷ್ಟಿ ದಿನ’ ಕಣ್ಣುಗಳ ಆರೈಕೆ ತಪಾಸಣೆ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕಣ್ಣು ಮತ್ತು ಕಿವಿಗಳ ಆರೈಕೆಗೆ ನಾವು ಹೆಚ್ಚು ಒತ್ತು ನೀಡುತ್ತಿದ್ದೇವೆ. ಕಣ್ಣಿನ ದೋಷವಿದ್ದವರಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅಂಧತ್ವ ತಡೆಗಟ್ಟಬಹುದು. ಎಲ್ಲರಲ್ಲೂ ಕಣ್ಣಗಳ ಬಗ್ಗೆ ಕಾಳಜಿ ಇರಬೇಕು. ಕಾಲ ಕಾಲಕ್ಕೆ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.
ಜಿಲ್ಲಾಸ್ಪತ್ರೆ ನೇತ್ರ ತಜ್ಞ ಡಾ.ಕೃಷ್ಣಮೂರ್ತಿ ಮಾತನಾಡಿ, ನಮ್ಮ ವಿಶ್ವದಲ್ಲಿ ಸುಮಾರು 248 ಮಿಲಿಯನ್ ಜನ ದೃಷ್ಠಿದೋಷದಿಂದ ಬಳಲುತ್ತಿದ್ದಾರೆ. ಡಯಾಬಿಟಿಕ್ ರೆಟಿನೋಪತಿ ಮತ್ತು ಗ್ಲಾಕೋಮಾದಂತಹ ರೋಗಗಳನ್ನು ನಿಯಮಿತವಾಗಿ ಪರೀಕ್ಷಿಸುವ ಮೂಲಕ ನಮ್ಮ ದೃಷ್ಠಿಯನ್ನು ಸಂರಕ್ಷಿಕೊಳ್ಳಬಹುದು. ಹಾಗೆ ನಮ್ಮ ಕಣ್ಣುಗಳು ಚೆನ್ನಾಗಿರಬೇಕೆಂದರೆ ನಾವು ಸೇವಿಸುವ ಆಹಾರ ಕೂಡ ತುಂಬಾ ಮುಖ್ಯವಾಗುತ್ತದೆ. ಹಾಗಾಗಿ ಪೌಷ್ಠಿಕ ಆಹಾರ, ಹಸಿರು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚಾಗಿ ಸೇವಿಸಬೇಕೆಂದು ಸಲಹೆ ನೀಡಿದರು.
40 ವರ್ಷ ಮೇಲ್ಪಟ್ಟವರು ತಮ್ಮ ಕಣ್ಣನ್ನು 6 ತಿಂಗಳು ಅಥವಾ 1 ವರ್ಷಕೊಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು. ಹೀಗೆ ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಂಡರೆ ಏನಾದರೂ ದೋಷಗಳಿದ್ದರೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅಂಧತ್ವ ತಡೆಗಟ್ಟಬಹುದು ಎಂದು ತಿಳಿಸಿದರು.

 

 

ಇದನ್ನು ಓದಲು ಕ್ಲಿಕ್ ಮಾಡಿ: ಗ್ರಾಮ ಪಂಚಾಯಿತಿ ಉಪ ಚುನಾವಣೆ ದಿನಾಂಕ‌ ಫಿಕ್ಸ್
ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಯಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ  1,741, ಚಳ್ಳಕೆರೆಯಲ್ಲಿ 716, ಹಿರಿಯೂರಿನಲ್ಲಿ 740, ಹೊಳಲ್ಕೆರೆಯಲ್ಲಿ 377, ಹೊಸದುರ್ಗದಲ್ಲಿ 527, ಮೊಳಕಾಲ್ಮೂರಿನಲ್ಲಿ 949 ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಅಂಧತ್ವ ವಿಭಾಗದ ಕಾರ್ಯಕ್ರಮ ಅನುಷ್ಟಾನಧಿಕಾರಿ  ಡಾ.ಆರ್.ರೂಪಾ ಮಾತನಾಡಿ, ಪೌಷ್ಠಿಕ ಆಹಾರ ಸೇವಿಸುವುದರ ಮೂಲಕ ನಾವು  ನಮ್ಮ ದೃಷ್ಠಿಯನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ ದಿನಮಾನಗಳಲ್ಲಿ ಮೊಬೈಲ್, ಲ್ಯಾಪ್‍ಟಾಪ್‍ಗಳ ಹೆಚ್ಚು ಬಳಕೆಯಿಂದಾಗಿ ಕಣ್ಣಿನ ಮೇಲೆ  ನೇರ ಪ್ರಭಾವ ಬೀರುವುದರಿಂದ ಕಣ್ಣಿನ ಸಮಸ್ಯೆಗೆ ಗುರಿಯಾಗಿದ್ದಾರೆ. ಹಾಗಾಗಿ ಮಿತವಾಗಿ ಅವುಗಳನ್ನು ಬಳಸುವುದರ ಮೂಲಕ  ಕಣ್ಣುಗಳ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾಸ್ಪತ್ರೆ ನೇತ್ರ ತಜ್ಞರಾದ ಡಾ.ಶಿಲ್ಪ, ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ಮಂಜುನಾಥ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ನೇತ್ರಾಧಿಕಾರಿ ರಾಮು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಇದ್ದರು.

[t4b-ticker]

You May Also Like

More From Author

+ There are no comments

Add yours