ಚಳ್ಳಕೆರೆ-27 ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸೈನಿಕರ ವಿರೋಧಿ ಯೋಜನೆಯಾಗಿದೆ. ಉಪಯೋಗಿಸುವ ಭೋಗದ ವಸ್ತುವಿನಂತೆ ಸೈನಿಕರನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿರುವುದು ದುರಾದೃಷ್ಟಕರ ಎಂದು ಶಾಸಕ ಟಿ.ರಘುಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.
ಅವರ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರ ಅವೈಜ್ಞಾನಿಕ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಚಳ್ಳಕೆರೆ ಹಾಗೂ ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಶಾಸಕರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ಅವೈಜ್ಞಾನಿಕವಾಗಿದೆ. ಈ ಯೋಜನೆಯಿಂದ ಯುವಕರಿಗೆ ಅನ್ಯಾಯವಾಗಲಿದೆ. ನಿರುದ್ಯೋಗ ಸೃಷ್ಟಿಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ ಶಂಕರ್ ಮತ್ತು ಮುಂಚೂಣಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
[t4b-ticker]
+ There are no comments
Add yours