ಶಿಕ್ಷಕರು ಮೌಲ್ಯ ಮತ್ತು ದಕ್ಷತೆಯನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಿ: ಶಾಸಕ ಟಿ‌.ರಘುಮೂರ್ತಿ

 

 

 

 

ಚಳ್ಳಕೆರೆ-05 ಶಿಕ್ಷಕರು ಮೌಲ್ಯ ಮತ್ತು ದಕ್ಷತೆಯನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

 

 

ಅವರು, ಸೋಮವಾರ ಇಲ್ಲಿನ ಶ್ರೀವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಕೃಷ್ಣನವರ ಜನ್ಮದಿನದ ಶಿಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕನನ್ನು ಎಂದಿಗೂ ಸಮಾಜ ಮರೆಯದು. ಶಿಕ್ಷಕರ ಯಾವುದೇ ಸಮಸ್ಯೆಗಳಿದ್ದರೂ ಸಹ ಅಧಿವೇಶನದಲ್ಲಿ ನಿಮ್ಮಪರವಾಗಿ ಚರ್ಚಿಸಿ ಪರಿಹಾರ ರೂಪಿಸಿಕೊಡುವ ಭರವಸೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಧಿಕಾರಿ ಕೆ.ಎಸ್.ಸುರೇಶ್ ಮಾತನಾಡಿ, ಉತ್ತಮ ಶಿಕ್ಷಕ ಶಿಕ್ಷಣ ಇಲಾಖೆಯ ಆಸ್ತಿ. ತಾಲ್ಲೂಕಿನಾದ್ಯಂತ ಇರುವ ಶಿಕ್ಷಕರು ಶಿಕ್ಷಣದ ಉನ್ನತ್ತಿಗಾಗಿ ಪ್ರಾಮಾಣಿಕತೆಯಿಂದ ಶ್ರಮಿಸುತ್ತಿದ್ದು, ಇಲಾಖೆ ಪರವಾಗಿ ಎಲ್ಲರನ್ನೂ ಅಭಿನಂದಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್ ರಘುಮೂರ್ತಿ, ಕವಿತ್ರಿ ತಾರಾಯಿಣಿ ಶುಭದಾಯಿನಿ, ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಆರ್.ಮಂಜುಳಾ, ಸದಸ್ಯರಾದ ಜೈತುಂಬಿ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಈರಣ್ಣ, ತಾಲ್ಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಎನ್.ಭೀಮಣ್ಣ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours