ಚಳ್ಳಕೆರೆ: ಶಾಸಕರಾದ ಟಿ ರಘುಮೂರ್ತಿ ಅವರು ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮಕ್ಕೆ ಭೇಟಿ ನೀಡಿ ಸುಮಾರು ಒಂದು ವಾರದಿಂದ ಸುರಿದ ಅಕಾಲಿಕ ಮಳೆಗೆ ಕೆರೆ ತುಂಬಿದ್ದು ಕೆರೆ ವೀಕ್ಷಣೆ ಮಾಡಿ ಬಾಗಿನ ಅರ್ಪಿಸಿದರು.
ಚಳ್ಳಕೆರೆ ತಾಲೂಕಿನಾದ್ಯಂತ ಒಂದು ವಾರದಿಂದ ಸುರಿದ ಅಕಾಲಿಕ ಮಳೆಗೆ ಕೆರೆಗಳು ತುಂಬಿದ್ದು ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು ರೈತರ ನೀರಾವರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೆಳಗೆರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಧು ಕುಮಾರ್, ಹಾಗೂ ಉಪಾಧ್ಯಕ್ಷರು, ಸದಸ್ಯರುಗಳು ಮತ್ತು ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶಿವಕುಮಾರ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಶಿವಣ್ಣ, ಮುಖಂಡರುಗಳಾದ ಕೆ.ಟಿ. ನಿಜಲಿಂಗಪ್ಪ, ಟಿ .ಡಿ. ಲಿಂಗನಗೌಡ, ಶ್ರೀಧರ, ಶ್ರೀನಿವಾಸ್, ತಿಪ್ಪಮ್ಮ, ಗಿರೀಶ್, ರಂಗಸ್ವಾಮಿ, ಮೂಡಲಗಿರಿಯಪ್ಪ ಹಾಗೂ ಕಾರ್ಯಕರ್ತರು, ಮುಖಂಡರುಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
[t4b-ticker]
+ There are no comments
Add yours