ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 26:
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಇದೇ ಸೆಪ್ಟೆಂಬರ್ 27ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಒನಕೆ ಓಬವ್ವ ವೃತ್ತದಿಂದ ಚಿತ್ರದುರ್ಗ ಕೋಟೆವರೆಗೆ ಕಲಾ ತಂಡಗಳು ಹಾಗೂ ಶಾಲಾ ಮಕ್ಕಳು, ಪ್ರವಾಸಿ ಮಾರ್ಗದರ್ಶಿಗಳು ಹಾಗೂ ಪ್ರವಾಸಿ ಮಿತ್ರರು ಹಾಗೂ ಕಂಸಾಳೆ ತಂಡ, ಡೊಳ್ಳು ಹಾಗೂ ವೀರಗಾಸೆ, ಕೀಲುಕುದುರೆ ಕಲಾ ತಂಡಗಳನ್ನು ಒಳಗೊಂಡ ಪ್ರವಾಸೋದ್ಯಮ ಜಾಥಾ ಹಾಗೂ ಕೋಟೆ ಆವರಣದಲ್ಲಿ ಸರ್ಕಾರಿ ಚಿತ್ರಕಲಾ ಶಿಕ್ಷಕರಿಂದ ಚಿತ್ರಕಲಾ ಶಿಬಿರದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಪ್ರವಾಸೋದ್ಯಮದ ಪುನರಾವಲೋಕನ ಎಂಬ ಸಂದೇಶದೊಂದಿಗೆ ಆಚರಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
[t4b-ticker]
+ There are no comments
Add yours