ಚಿತ್ರದುರ್ಗ ಅ. 05 (ಕರ್ನಾಟಕ ವಾರ್ತೆ) :
ರಾಜ್ಯದ ಮುಖ್ಯಮಂತ್ರಿಗಳಾದ (Chief minister ) ಸಿದ್ದರಾಮಯ್ಯ ಅವರು ಅ. 06 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ:ನಾಗಪುರ ದೀಕ್ಷಾ ಭೂಮಿಗೆ ನೀವು ಹೋಗಬೇಕಾದರೆ ಮಿಸ್ ಮಾಡದೇ ಅರ್ಜಿ ಹಾಕಿ
ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಬೆಳಿಗ್ಗೆ 11 ಗಂಟೆಗೆ ಮುರುಘಾಮಠ ಹಿಂಭಾಗದ ಹೆಲಿಪ್ಯಾಡ್ಗೆ ಆಗಮಿಸುವರು. ನಂತರ ಇಲ್ಲಿನ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಬೆ. 11.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಿರಿಯೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್ಗೆ ಆಗಮಿಸುವರು, ಮಧ್ಯಾಹ್ನ 12.10 ಗಂಟೆಗೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಗೆ ತೆರಳಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಆಯೋಜಿಸಿರುವ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.40 ಗಂಟೆಗೆ ಹಿರಿಯೂರಿಗೆ ತೆರಳಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಆಯೋಜಿಸಿರುವ “ಕನಕ ಸಮುದಾಯ ಭವನ” ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸುವರು. ಮಧ್ಯಾಹ್ನ 3.10 ಗಂಟೆಗೆ ಹಿರಿಯೂರಿನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
[t4b-ticker]
+ There are no comments
Add yours