ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.03:
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 03 ಬುಧವಾರದಂದು ಆರು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಾರ್ವತ್ರಿಕ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ದೇವರಾಜ ಟಿ, ಕೆ.ನರಸಿಂಹಮೂರ್ತಿ, ಕೃಷ್ಣಮೂರ್ತಿ, ರಘುಕುಮಾರ್ ಎಸ್, ಕರುನಾಡ ಸೇವಕ ಪಕ್ಷದ ಅಭ್ಯರ್ಥಿಯಾಗಿ ಶಬರೀಶ್ ಆರ್, ಇಂಡಿಯನ್ ಮೂವ್ಮೆಂಟ್ ಪಾರ್ಟಿಯ ಅಭ್ಯರ್ಥಿಯಾಗಿ ಬಿ.ಟಿ.ರಾಮಸುಬ್ಬಯ್ಯ ಅವರು ಉಮೇದುವಾರಿಕೆ ಸಲ್ಲಿಸಿದರು.
ಇದನ್ನೂ ಓದಿ: ನಿಮ್ಮ ಊರುಗಳಲ್ಲಿ ಅತ್ಯಧಿಕ ಲೀಡ್ ನೀಡಿ:ಶಾಸಕ ಟಿ.ರಘುಮೂರ್ತಿ ಕರೆ
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇದುವರೆಗೆ ಒಟ್ಟು 11 ಅಭ್ಯರ್ಥಿಗಳಿಂದ 14 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.
[t4b-ticker]
+ There are no comments
Add yours