ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ12:
ಪ್ರಧಾನ ಮಂತ್ರಿ ಅತಿಸಣ್ಣ ಆಹಾರ ಸಂಸ್ಕರಣಾ ಎಂಟರ್ಪ್ರೈಜ್ ಯೋಜನೆಯಡಿ (ಪಿ.ಎಂ.ಎಫ್.ಎಂ.ಇ)ಆಯ್ಕೆಯಾದ ಮಹಿಳಾ ಸ್ವಹಾಯ ಸಂಘದ 15 ಸದಸ್ಯರುಗಳಿಗೆ ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ತಲಾ 40 ಸಾವಿರ ರೂಪಾಯಿಗಳ ಚೆಕ್ ವಿತರಣೆ ಮಾಡಿದರು.
ಡೇ ನಲ್ಮ್ ಅಭಿಯಾನದಡಿ ಅತಿಸಣ್ಣ ಆಹಾರ ಸಂಸ್ಕರಣೆಯಲ್ಲಿ ತೊಡಗಿದ ಮಹಿಳೆಯರಿಗೆ ಯೋಜನೆಯಡಿ ದೊರೆಯುವ ಸೌಲಭ್ಯವನ್ನು ವಿಸ್ತರಿಸುವ ಸಲುವಾಗಿ ನಗರ ಸಭೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 260 ಫಲಾನುಭವಿಗಳ ಆಯ್ಕೆಗೆ ಗುರಿ ನಿಗದಿಪಡಿಸಲಾಗಿತ್ತು. 15 ಜನರು ಆಯ್ಕೆ ಆಗಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಜೆ.ಟಿ.ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಾ, ನಗರಸಭೆ ಸಿಬ್ಬಂದಿ ಫಲಾನುಭವಿಗಳು ಇದ್ದರು.
[t4b-ticker]
+ There are no comments
Add yours