ಸಾಧ್ಯವಾದರೆ ಸಮಸ್ಯೆ ಬಗೆಹರಿಸಿಕೊಳ್ಳೋಣ, ಇಲ್ಲವೇ ಹೋರಾಡೋಣ:ಶಿವಮೂರ್ತಿ ಮುರುಘಾ ಶರಣರು.

 

 

 

 

ಚಿತ್ರದುರ್ಗ: ಮುರುಘಾ  ಮಠದ ಒಳಗಿರುವವರೇ ನನ್ನ ವಿರುದ್ದ   ಷಡ್ಯಂತ್ರ, ಪಿತೂರಿ ನಡೆಸಿದ್ದಾರೆ. ಈ ಸಮಸ್ಯೆ ಶಾಶ್ವತವಲ್ಲ. ಯಾರೊಬ್ಬರೂ ದುಃಖ ಪಡಬೇಡಿ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಭಕ್ತರಿಗೆ ಕೋರಿದ್ದಾರೆ.

ಮಠದಲ್ಲಿ ಶನಿವಾರ ನಡೆದ ಭಕ್ತರ ಸಭೆಯಲ್ಲಿ ಅವರು ಮಾತನಾಡಿದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 

 

ಎಲ್ಲವನ್ನೂ ಕಾಲವೇ ನಿರ್ಧಾರ ಮಾಡಲಿದೆ. . ಸಾಧ್ಯವಾದರೆ ಸಮಸ್ಯೆ ಬಗೆಹರಿಸಿಕೊಳ್ಳೋಣ, ಇಲ್ಲವೇ ಹೋರಾಡೋಣ. ಎರಡೂ ವಿಚಾರಕ್ಕೂ ನಾವು ಸಿದ್ಧ. ಸಮರ ಹಾಗೂ ಸಂಧಾನದ ಹಾದಿಗಳು ನಮ್ಮ ಎದುರು ಇವೆ’ ಎಂದು ತಿಳಿಸಿದರು.

‘ರೋಲ್‌ಕಾಲ್, ಬ್ಲ್ಯಾಕ್‌ಮೇಲ್ ತಂತ್ರದ ಮೂಲಕ ಅಧಿಕಾರ ಬೇಕು ಎಂಬ ಧೋರಣೆ ಇಲ್ಲಿ ಮುಖ್ಯವಾಗಿದೆ. ಜಗತ್ತಿನಲ್ಲಿ ಧರ್ಮಾಂಧರು, ಕಳ್ಳರು ಈ ರೀತಿ ಸನ್ನಿವೇಶ ಎದುರಿಸಿಲ್ಲ. ತಾತ್ವಿಕ ತಳಹದಿಯ ಮೇಲೆ ನಡೆದವರಿಗೆ ಕುತ್ತು ಎದುರಾಗುತ್ತದೆ. ಗಾಂಧಿ, ಬಸವಣ್ಣ ಅವರೂ ನೋವಿನ ದಿನಗಳನ್ನು ಎದುರಿಸಿದ್ದಾರೆ.

‘ಎಲ್ಲ ಸಮಾಜ ಸುಧಾರಕರ ಕಾಲದಲ್ಲಿಯೂ ಸಾತ್ವಿಕ ಶಕ್ತಿ ಮತ್ತು ದುಷ್ಟಶಕ್ತಿಯ ನಡುವೆ ಹೋರಾಟ ನಡೆಯುತ್ತಲೇ ಇದೆ.  ಈ‌ ಪ್ರಕರಣ ಸಹ ಆ  ಪಟ್ಟಿಗೆ ಸೇರಲಿದೆ. ಸಾತ್ವಿಕರು ಸಕಾರಾತ್ಮಕ ಧೋರಣೆ ಹೊಂದಿರುತ್ತಾರೆ. ಅದಕ್ಕೆ ವ್ಯತಿರಿಕ್ತವಾಗಿ ಅನೇಕರು ನಕಾರಾತ್ಮಕ ಧೋರಣೆ ಹೊಂದಿರುತ್ತಾರೆ ಎಂಬ ಮಾತುಗಳನ್ನು ಶರಣರು‌ ಹಾಡಿದ್ದರಾಎ.

[t4b-ticker]

You May Also Like

More From Author

+ There are no comments

Add yours