ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 20 :
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸಲಿದ್ದಾರೆ.
ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಅನೇಕ ಯೋಜನೆಗಳನ್ನು ಅನಷ್ಟಾನಗೊಳಿಸದೆ ಇರುವುದು ಮತ್ತು ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಅನಾವಶ್ಯಕ ವಿಳಂಬ ಮಾಡುತ್ತಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತನ ಮತ್ತು ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲವು ಸಾರ್ವಜನಿಕ ಅಧಿಕಾರಿಗಳು ಭ್ರಷ್ಟಾಚಾರ ತೊಡಗಿ ದುರಾಡಳಿತ ನಡೆಸುತ್ತಿರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಗೌರವಾನ್ವಿತ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರುರವರಿಗೆ ಲೋಕಾಯುಕ್ತ ಅಧಿಕಾರಿಗಳ ಮುಖಾಂತರ ದೂರುಗಳನ್ನು ನಿಗಧಿತ ನಮೂನೆ-1&2 ರಲ್ಲಿ ಸಲ್ಲಿಸಬಹುದಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ವಿವರ: ಇದೇ ಸೆಪ್ಟಂಬರ್ 26ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-1 ಹಾಗೂ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1. 30 ರವರೆಗೆ ಹೂಸದುರ್ಗ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನೀರೀಕ್ಷಕರು -2 ಹಾಜರಿದ್ದು, ದೂರುಗಳನ್ನು ಸ್ವೀಕರಿಸಲಿದ್ದಾರೆ.
ಸೆಪ್ಟಂಬರ್ 27ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮೊಳಕಾಲ್ಮೂರು ತಾಲ್ಲೂಕು ಪಂಚಾಯತಿಯಲ್ಲಿ ಪೊಲೀಸ್ ಉಪಾಧೀಕ್ಷಕರು ಹಾಜರಿರುವರು. ಬೆಳಿಗ್ಗೆ 10 ರಿಂದ 1.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷರು-1 ಹಾಜರಿದ್ದು, ಅಹವಾಲು ಸ್ವೀಕರಿಸಲಿದ್ದಾರೆ.
ಸೆಪ್ಟಂಬರ್ 28ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಚಿತ್ರದುರ್ಗದ ಬಿಡಿ ರಸ್ತೆಯ ಪ್ರವಾಸಿ ಮಂದಿರದ ಪಕ್ಕದಲ್ಲಿರುವ ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷರು-1 ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸೆಪ್ಟಂಬರ್ 29ರಂದು ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ 10.30ರಿಂದ 1:30 ರವರಗೆ ಪೊಲೀಸ್ ನಿರೀಕ್ಷಕರು -2 ಹಾಜರಿದ್ದು, ಸಾರ್ವಜನಿಕರ ಅಹವಾಲು, ದೂರುಗಳನ್ನು ಸ್ವೀಕರಿಸಲಿದ್ದಾರೆ.
ಯಾವುದೇ ನ್ಯಾಯಾಲಯಗಳಲ್ಲಿ ಹಾಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಕುರಿತು ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
[t4b-ticker]ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸಲಿದ್ದಾರೆ.
ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಅನೇಕ ಯೋಜನೆಗಳನ್ನು ಅನಷ್ಟಾನಗೊಳಿಸದೆ ಇರುವುದು ಮತ್ತು ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಅನಾವಶ್ಯಕ ವಿಳಂಬ ಮಾಡುತ್ತಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತನ ಮತ್ತು ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲವು ಸಾರ್ವಜನಿಕ ಅಧಿಕಾರಿಗಳು ಭ್ರಷ್ಟಾಚಾರ ತೊಡಗಿ ದುರಾಡಳಿತ ನಡೆಸುತ್ತಿರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಗೌರವಾನ್ವಿತ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರುರವರಿಗೆ ಲೋಕಾಯುಕ್ತ ಅಧಿಕಾರಿಗಳ ಮುಖಾಂತರ ದೂರುಗಳನ್ನು ನಿಗಧಿತ ನಮೂನೆ-1&2 ರಲ್ಲಿ ಸಲ್ಲಿಸಬಹುದಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ವಿವರ: ಇದೇ ಸೆಪ್ಟಂಬರ್ 26ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-1 ಹಾಗೂ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1. 30 ರವರೆಗೆ ಹೂಸದುರ್ಗ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನೀರೀಕ್ಷಕರು -2 ಹಾಜರಿದ್ದು, ದೂರುಗಳನ್ನು ಸ್ವೀಕರಿಸಲಿದ್ದಾರೆ.
ಸೆಪ್ಟಂಬರ್ 27ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮೊಳಕಾಲ್ಮೂರು ತಾಲ್ಲೂಕು ಪಂಚಾಯತಿಯಲ್ಲಿ ಪೊಲೀಸ್ ಉಪಾಧೀಕ್ಷಕರು ಹಾಜರಿರುವರು. ಬೆಳಿಗ್ಗೆ 10 ರಿಂದ 1.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷರು-1 ಹಾಜರಿದ್ದು, ಅಹವಾಲು ಸ್ವೀಕರಿಸಲಿದ್ದಾರೆ.
ಸೆಪ್ಟಂಬರ್ 28ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಚಿತ್ರದುರ್ಗದ ಬಿಡಿ ರಸ್ತೆಯ ಪ್ರವಾಸಿ ಮಂದಿರದ ಪಕ್ಕದಲ್ಲಿರುವ ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷರು-1 ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸೆಪ್ಟಂಬರ್ 29ರಂದು ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ 10.30ರಿಂದ 1:30 ರವರಗೆ ಪೊಲೀಸ್ ನಿರೀಕ್ಷಕರು -2 ಹಾಜರಿದ್ದು, ಸಾರ್ವಜನಿಕರ ಅಹವಾಲು, ದೂರುಗಳನ್ನು ಸ್ವೀಕರಿಸಲಿದ್ದಾರೆ.
ಯಾವುದೇ ನ್ಯಾಯಾಲಯಗಳಲ್ಲಿ ಹಾಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಕುರಿತು ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
+ There are no comments
Add yours