ಸೆ.30 ರವರೆಗೆ ಉಚಿತ ಕೋವಿಡ್ ಲಸಿಕೆ:ಡಿಸಿ ಕವಿತಾ ಎಸ್.ಮನ್ನಿಕೇರಿ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 14:

ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟ 10 ಲಕ್ಷದ 40 ಸಾವಿರ ಫಲಾನುಭವಿಗಳಿಗೆ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ಲಸಿಕೆ ಸೆಪ್ಟ್ಟಂಬರ್ 30ರವರಗೆ ನೀಡಲಾಗುವುದು.
ಜಿಲ್ಲಾ ಆಸ್ಪತ್ರೆ, ಎಲ್ಲಾ ತಾಲ್ಲೂಕುಗಳಲ್ಲಿ ಆಸ್ಪತ್ರೆಗಳು, ಎಲ್ಲಾ ಸಮುದಾಯ ಕೇಂದ್ರಗಳು, ಎಲ್ಲಾ  ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಎಲ್ಲಾ ನಗರ ಆರೋಗ್ಯ ಕೇಂದ್ರಗಳು, ಉಪ ಕೇಂದ್ರಗಳು ಹಾಗೂ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಲಸಿಕೆ ಪಡೆಯಬಹುದು. 15,520 ಡೋಸ್ ಕೋವಿಶೀಲ್ಡ್, 44,500 ಡೋಸ್ ಕೋವ್ಯಾಕ್ಸಿನ್ ಮತ್ತು 8,080 ಡೋಸ್ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯವಿದ್ದು, ಅರ್ಹ ಫಲಾನುಭವಿಗಳು ಲಸಿಕೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours