ಮಧ್ಯಸ್ಥಿಕೆಗಾರರ ನೇಮಕಾತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 13:
ಜಿಲ್ಲಾ ಗ್ರಾಹಕರ ಆಯೋಗದ ಮಧ್ಯಸ್ಥಿಕೆ ಕೇಂದ್ರದಲ್ಲಿ ಖಾಲಿ ಇರುವ ಮಧ್ಯಸ್ಥಿಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 26 ಅರ್ಜಿ ಸಲ್ಲಿಸಲು ಕೊನೆಯ ದಿನ.
ಆಸಕ್ತರು ಅರ್ಜಿ ನಮೂನೆಯನ್ನು https://kscdrc.karnataka.gov.in ರಿಂದ ಡೌನ್‍ಲೋಡ್ ಮಾಡಿಕೊಂಡು, ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳೊಂದಿಗೆ ಆಗಸ್ಟ್ 26 ಸಂಜೆ 5 ರೊಳಗೆ ಚಿತ್ರದುರ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಚೇರಿಗೆ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ದೂರವಾಣಿ ಸಂಖ್ಯೆ 08194-231451 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours