ನಗರಸಭೆ ಪೌರಯುಕ್ತ ಜೆ.ಟಿ.ಹನುಮಂತರಾಜು ನಿಧನ

 

 

 

 

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಪೌರಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ  ಜೆ.ಟಿ.ಹನುಮಂತರಾಜು (57) ಒಂದು ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದು ಸ್ವಲ್ಪ ಸುಧಾರಣೆ ಆಗಿದೆ ಎಂದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಕಳೆದು ಒಂದು ತಿಂಗಳಿಂದ ಮತ್ತಷ್ಟು ಆರೋಗ್ಯ ಹದಗೆಟ್ಟಿದ್ದು  ಇಂದು ಕೊನೆಯುಸಿರೆಳೆದಿದ್ದಾರೆ.

ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಶನೈಶ್ವರ ದೇವಸ್ಥಾನ ಸಮೀಪದಲ್ಲಿರುವ ಸ್ವಗೃಹದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

 

 

ಮೃತ ಹನುಮಂತರಾಜು ಅವರಿಗೆ ತಂದೆ, ತಾಯಿ, ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಅಂತ್ಯ ಸಂಸ್ಕಾರಃ ಜಗಳೂರು ತಾಲೂಕಿನ ಮುಸ್ಟೂರು ಸಮೀಪದ ಹಿರೇ ಮಲ್ಲನಹೊಳೆ ಗ್ರಾಮದ ತೋಟದ ಜಮೀನಿನಲ್ಲಿ ಡಿಸೆಂಬರ್-1 ರಂದು ಗುರುವಾರ ಬೆಳಿಗ್ಗೆ 11 ಗಂಟೆ ವೇಳೆಗೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಅಂತಿಮ ನಮನಃ
ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಸೇರಿದಂತೆ ಹಲವು ರಾಜಕಾರಣಿಗಳು, ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರುಗಳು, ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದ್ದಾರೆ.

 

[t4b-ticker]

You May Also Like

More From Author

+ There are no comments

Add yours