ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ವಿಷಯವನ್ನು ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ.
ನನಗೆ ಕೋವಿಡ್ ಪಾಸಿಟಿವ್ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಕೊರೋನಾ ದೃಢಪಟ್ಟ ತಕ್ಷಣ ಪ್ರತ್ಯೇಕವಾಗಿದ್ದು ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಪರೀಕ್ಷೆ ಮಾಡಿಸಿಕೊಂಡು ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿಯವರು ದೆಹಲಿ ತೆರಳಬೇಕಿತ್ತು. ಆದರೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ರದ್ದಾಗಿದೆ. ಮುಖ್ಯಮಂತ್ರಿಗಳು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಅಧಿಕೃತ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು ಎಂದು ತಿಳಿದು ಬಂದಿದೆ.
[t4b-ticker]
+ There are no comments
Add yours