ಕಳಪೆ ರಸ್ತೆ ಕಾಮಗಾರಿ ಆರೋಪ ಗ್ರಾಮಸ್ಥರಿಂದ ಇಂಜಿನಿಯರ್ ಗೆ ಕಲ್ಲೇಟು

 

 ಚಿತ್ರದುರ್ಗ: ಕಳಪೆ ರಸ್ತೆ ಕಾಮಗಾರಿಯ ಆರೋಪಿಸಿ  ಗ್ರಾಮಸ್ಥರು   ಎಂಜಿನಿಯರ್‌ಗೆ ಕಲ್ಲೇಟು ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ತಲೆಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಎಂಜಿನಿಯರ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ ತಾಲೂಕಿ‌ನ  ಕಸವನಹಳ್ಳಿಯಲ್ಲಿ ಘಟನೆ ನಡೆದಿದ್ದು  ಪಿಡಬ್ಲ್ಯುಡಿ ಎಂಜಿನಿಯರ್ ನಾಗರಾಜ್‌ಗೆ ಸುಮಾರು ಏಳು ಜನ ಗ್ರಾಮಸ್ಥರು ಸೇರಿಕೊಂಡು ಕಲ್ಲೆಸೆದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ನಮ್ಮ ಗ್ರಾಮ, ನಮ್ಮ ರಸ್ತೆ ಯೋಜನೆಯಡಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಕಸವನಹಳ್ಳಿ ರಸ್ತೆ ಕಾಮಗಾರಿ ಮಾಡಲಾಗುತ್ತಿತ್ತು. ಆದರೆ ರಸ್ತೆ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆ ಕಾಮಗಾರಿ ವೀಕ್ಷಿಸಲು  ತೆರಳಿದ್ದ ವೇಳೆ ಎಂಜಿನಿಯರ್ ಬಳಿ ಮಾತನಾಡುವಾಗ ಮಾತಿನ ಚಕಮಕಿ ನಡೆಸಿದ ಗ್ರಾಮಸ್ಥರು‌ ಇಂಜಿನಿಯರ್ ಅವರನ್ನು  ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಗಲಾಟೆ ನಡೆದು, ನೂಕಾಟ, ತಳ್ಳಾಟದ ವೇಳೆ ನಾಗರಾಜ್ ಮೇಲೆ ಕಲ್ಲೆಸೆಯಲಾಗಿದೆ. ನಾಗರಾಜ್ ತಲೆಗೆ ಗಂಭೀರ ಗಾಯವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಸಂಬಂಧ ಕಸವನಹಳ್ಳಿಯ ವೀರಕರಿಯಪ್ಪ ಮತ್ತಿತರರ ವಿರುದ್ಧ ಹಲ್ಲೆಯ ಆರೋಪ ಹೊರಿಸಲಾಗಿದೆ. ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

[t4b-ticker]

You May Also Like

More From Author

+ There are no comments

Add yours