ಸಾರ್ವಜನಿಕರ / ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಉತ್ತಮ ಚಿಕಿತ್ಸೆ ನೀಡಬೇಕೆಂದು ಸಲಹೆ….
ಹೊಸದುರ್ಗ ತಾಲ್ಲೂಕು ಬೆಲಗೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಚಿತ್ರದುರ್ಗ ಜಿಲ್ಲಾ ಪಂಚಾಯತ್ ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಯುತ ಎಂ ಎಸ್. ದಿವಾಕರ್ ಸರ್….
ಆಸ್ಪತ್ರೆಯ ಸ್ವಚ್ಛತೆ. ಔಷಧಿಗಳನ್ನ ಹಾಗೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸಿದರು.
ಇಂದು ಹೊಸದುರ್ಗ ತಾಲ್ಲೂಕು ಬೆಲಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿ, ಅಲ್ಲಿ ಇದ್ದಂತಹ ರೋಗಿಗಳ ಆರೋಗ್ಯವನ್ನು ವಿಚಾರಿಸಿ, ಆಸ್ಪತ್ರೆಯ ಸ್ವಚ್ಛತೆ, ಔಷಧಿಗಳು ಹಾಗೂ ಅಧಿಕಾರಿ/ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಪರಿಶೀಲನೆ ಮಾಡಿದರು. ಅಲ್ಲೇ ಇದ್ದಂತಹ ಅಧಿಕಾರಿಗಳಿಗೆ / ಸಿಬ್ಬಂದಿಗಳಿಗೆ ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಚಿಕಿತ್ಸೆ ನೀಡಬೇಕೆಂದು ಎಚ್ಚರಿಕೆ ನೀಡಿದರು…
ಈ ಸಂದರ್ಭದಲ್ಲಿ ತಾಲ್ಲೂಕು ನ ಕಾರ್ಯನಿರ್ವಾಹಕ ಅಧಿಕಾರಿಗಳು, ಆಸ್ಪತ್ರೆಯ ಅಧಿಕಾರಿಗಳು/ ಸಿಬ್ಬಂದಿಗಳು, ರೋಗಿಗಳು ಹಾಗೂ ಸಾರ್ವಜನಿಕರು ಇದ್ದರು.
+ There are no comments
Add yours