ದೇಶದ ಜನರಿಗೆ ಮೂಲಭೂತ ಸೌಲಭ್ಯ ಒದಗಿದ್ದು ಕಾಂಗ್ರೆಸ್:ಟಿ.ರಘುಮೂರ್ತಿ

 

 

ಗರೀಭಿ ಹಠವೋ ಮೂಲಕ ದೇಶದ ಬಡಜನರಿಗೆ ಸಹಾಯಹಸ್ತ ನೀಡಿದ ಕೀರ್ತಿ ಕಾಂಗ್ರೆಸ್ ಪಕ್ಷದ್ದು : ಟಿ.ರಘುಮೂರ್ತಿ

ಚಳ್ಳಕೆರೆ:  ಗರೀಭಿ ಹಠವೋ ಮೂಲಕ ದೇಶದ ಬಡಜನರಿಗೆ ಅನ್ನ, ನೀರು, ಬಟ್ಟೆಯನ್ನು ಒದಗಿಸಿದ ಕೀರ್ತಿ ಕಾಂಗ್ರೆಸ್ ಪಕ್ಷದ್ದು. ಕಾಂಗ್ರೆಸ್ ಪಕ್ಷದ ಮಾಜಿ ಪ್ರಧಾನಮಂತ್ರಿ ಜವಹರಲಾಲ್ ನೆಹರೂ, ಇಂದಿರಾಗಾಂಧಿಯವರು ದೇಶದ ಜನರಿಗೆ ರಕ್ಷಣೆ ಒದಗಿಸುವ ಜೊತೆಗೆ ಪ್ರತಿಯೊಬ್ಬರೂ ಸಮಾನತೆಯ ರೀತಿಯಲ್ಲಿ ಜೀವನ ನಿರ್ವಹಿಸುವ ಅವಕಾಶ ಮಾಡಿಕೊಟ್ಟವರು. ಅವರ ಚಿಂತನೆಗಳ ಫಲವಾಗಿ ಇಂದು ಕಾಂಗ್ರೆಸ್ ಪಕ್ಷ ವಿಶ್ವದಲ್ಲೇ ಶಕ್ತಿಯುತವಾಗಿ ಬೆಳೆದಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಅವರು, ಗುರುವಾರ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಚಳ್ಳಕೆರೆ ಮತ್ತು ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ೧೩೮ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪುಪ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವಾರು ಜನಪರ ಯೋಜನೆಗಳ ಮೂಲಕ ಜನಸಾಮಾನ್ಯರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಅತಿಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಪಡೆಯಲು ಪಕ್ಷದ ಕಾರ್ಯಕರ್ತರು ಮುಖಂಡರು ಇಂದೇ ಸಂಕಲ್ಪ ಮಾಡಬೇಕು ಎಂದರು.

ಇದನ್ನೂ ಓದಿ: ಎರಡು ದಿನ ವಾಣಿವಿಲಾಸ ಸಾಗರ ನೀರು ಬರಲ್ಲ

ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಕೆಡಿಪಿ ಸದಸ್ಯ ಓ.ರಂಗಸ್ವಾಮಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ.ಪ್ರಕಾಶ್‌ಮೂರ್ತಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ ಸದಸ್ಯರಾದ ಸುಮಭರಮಣ್ಣ, ಕವಿತಾಬೋರಯ್ಯ, ಮುಖಂಡರಾದ ಕಿರಣ್‌ಶಂಕರ್, ಟಿ.ಗಿರಿಯಪ್ಪ, ಆಂಜನೇಯ, ಎಸ್.ಎಚ್.ಸೈಯದ್, ಅನ್ವರ್ ಮಾಸ್ಟರ್, ಆರ್.ಪ್ರಸನ್ನಕುಮಾರ್, ನೇತಾಜಿ ಪ್ರಸನ್ನ, ಬಿ.ಫರೀದ್‌ಖಾನ್, ಶಿವಕುಮಾರ್, ರಾಜಣ್ಣ, ಸ್ವಾಮಿ, ಖಾದರ್ ಯರಬಾಲಪ್ಪ, ಸಿ.ಓಬಯ್ಯ, ಬಿ.ಎಂ.ಭಾಗ್ಯಮ್ಮ, ಸರಸ್ವರಮ್ಮ, ರಾಜಮ್ಮ, ಕವಿತಾ, ಭಾಗ್ಯಲಕ್ಷ್ಮಿ, ಮಂಜುಳಾ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

[t4b-ticker]

You May Also Like

More From Author

+ There are no comments

Add yours