ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಮುಖ್ಯ ನಿರ್ವಹಣಾಧಿಕಾರಿಗಳ ಶಿಫಾರಸ್ಸಿ ನಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಆಕ್ಸಿಜನ್ ಹೈ ಫ್ಲೋ ಯಂತ್ರ ವನ್ನು ಸರಕಾರಿ ಜಿಲ್ಲಾ ಆಸ್ಪತ್ರೆ ಚಿತ್ರದುರ್ಗಕ್ಕೆ ಕರ್ನಾಟಕ ಸರಕಾರದ ಅರೋಗ್ಯ ಸಚಿವರಾದ ಡಾ. ಸುಧಾಕರ್ ರವರಿಂದ ಹಸ್ತಾಂತರ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಚಿತ್ರದುರ್ಗ ಶಾಸಕರಾದ ತಿಪ್ಪಾರೆಡ್ಡಿಯವರು, ಹಿರಿಯೂರು ಶಾಸಕರಾದ ಪೂರ್ಣಿಮಾಶ್ರೀನಿವಾಸ್, ಹೊಳಲ್ಕೆರೆ ಶಾಸಕರಾದ ಚಂದ್ರಪ್ಪರವರು, ಜಿಲ್ಲಾಧಿಕಾರಿಗಳಾದ ಕವಿತಾಮನ್ನಿಕೇರಿ, ಗ್ರಾಮಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ, ಜನಜಾಗೃತಿ ಸದಸ್ಯರಾದ ನಾಗರಾಜ್ ಸಂಗo ಇದ್ದರು.
[t4b-ticker]
+ There are no comments
Add yours