ಕೋವಿಡ್ ಮಾಹಮಾರಿ ಹಲವು ಕುಟುಂಬಗಳನ್ನು ಬಲಿ ಪಡೆದುಕೊಂಡು ಕುಡುಂಬದ ನೋವು ಇನ್ನೂ ಮಾಸಿಲ್ಲದೇ ಇರುವ ಇಂತಹ ಸಂದರ್ಭದಲ್ಲಿ ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕು (Covid 19)ಮತ್ತೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 335 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಜನರಲ್ಲಿ ಆತಂಕ ತಂದಿದೆ.
ಕೊರೊನಾ ಸೋಂಕು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು 335 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣ 1701ಕ್ಕೆ ಏರಿಕೆ ಕಂಡಿದ್ದು ಇನ್ನೂ ಹೆಚ್ಚುವ ಸಾಧ್ಯತೆ ಇದೆ.
ಇನ್ನು ಒಂದೇ ದಿನದಲ್ಲಿ ದೇಶದಲ್ಲಿ 5 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಕೇರಳ, ಉತ್ತರ ಪ್ರದೇಶಸೇರಿದಂತೆ ಕೋವಿಡ್ ಗೆ ಐವರು ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ಕೊರೊನಾ ಹೊಸತಳಿ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದೆ.
ಇದನ್ನೂ ಓದಿ: ಸರ್ಕಾರಿ ಐಬಿಯಲ್ಲಿ ಇಸ್ಪೀಟ್ ಆಡುತ್ತಿದ್ದ ನಗರಸಭೆ ಸದಸ್ಯ ಸೇರಿ 14 ಜನ ಅರೆಸ್ಟ್
ದೇಶದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4.46 ಕೋಟಿಗೆ (4,44,69,799) ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆ ದರವನ್ನು 98.81 ಪ್ರತಿಶತಕ್ಕೆ ನಿಗದಿಪಡಿಸಲಾಗಿದೆ. ಇಲ್ಲಿಯವರೆಗೆ, ಕೋವಿಡ್ -19 ನಿಂದ 5,33,316 ಜನರು ಸಾವನ್ನಪ್ಪಿದ್ದಾರೆ ಮತ್ತು ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ ಎಂದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
[t4b-ticker]
+ There are no comments
Add yours