ಕೂನಬೇವು ಗ್ರಾ.ಪಂ. ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ಪರಿಶೀಲಿಸಿದ ಶಾಸಕ ಟಿ.ರಘುಮೂರ್ತಿ

 

 

 

 

ಚಳ್ಳಕೆರೆ: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆ, ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಅವರು ಇಂದು ಕ್ಷೇತ್ರದ ಕೂನಬೇವು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕೋವಿಡ್ ಟಾಸ್ಕ ಪೋರ್ಸ ಪ್ರಗತಿಪರಿಶೀಲನಾ ಸಭೆ ಕೈಗೊಂಡು , ಅಧಿಕಾರಿಗಳಿಗೆ ಸೂಚನೆ ನೀಡಿದರು

ನಂತರ ಆರೋಗ್ಯ ಇಲಾಖೆ ಅಧಿಕಾರಿಗಳು, ಕೋವಿಡ್ ವಾರಿಯರ್ಸ್‌ ಹಾಗೂ ಆಶಾ ಕಾರ್ಯಕರ್ತರೊಂದಿಗೆ ಮಾತನಾಡಿ ಮಾನ್ಯ ಶಾಸಕರು, ಮನೆಮನೆಗೆ ಹೋಗಿ ಸೋಂಕಿತರ ಆರೈಕೆಗಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಆಶಾ ಕಾರ್ಯಕರ್ತರು ಪಾಲಿಸಬೇಕಾದ ನಿಯಮಗಳನ್ನು ಸೂಕ್ತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.

 

 

ಇದೇ ವೇಳೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ನವೀನ , ಗ್ರಾಮ ಪಂಚಾಯಿತಿ ಅದ್ಯಕ್ಷರಾದ ಮಲ್ಲಿಕಾರ್ಜುನ , ಉಪಾಧ್ಯಕ್ಷರಾದ ಬೋರಮ್ಮ ಹಾಗೂ ಇತರೆ ಅಧಿಕಾರಿಗಳಿಗೂ ಎಚ್ಚರಿಕೆಯಿಂದ ಕ್ರಮಬದ್ಧವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.

ಈ ವೇಳೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹನುಮಂತಪ್ಪ ತಾಲೂಕು ಆರೋಗ್ಯ ಅಧಿಕಾರಿಗಳಾದ ಗಿರೀಶ್ ಉಪ ತಹಶೀಲ್ದಾರ್ ಮಂಜಪ್ಪ ಪಿಎಸ್ಐ ಶಿವಕುಮಾರ್ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಅಶಾ ಕಾರ್ಯಕರ್ತರ ಅಂಗನವಾಡಿ ಕಾರ್ಯಕರ್ತರು ಮುಂತಾದವರು ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours