ಕೊರೋನಾ ಸಂಕಷ್ಟಕ್ಕೆ ಮಿಡಿದ ಸುಧಾ ಮೂರ್ತಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಸುಧಾಕರ್.

 

ಬ್ರಾಡ್‌ ವೇ ಆಸ್ಪತ್ರೆಯು 200 ಹಾಸಿಗೆಗಳ ಕೋವಿಡ್‌ ಆಸ್ಪತ್ರೆಯಾಗಿ ಸಜ್ಜು, ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್‌, ಪ್ಯಾರಾ ಮೆಡಿಲ್‌ ಮತ್ತು ಇತರೆ ಸಿಬ್ಬಂದಿ ನಿಯೋಜನೆ ಇನ್ನು ಎರಡು ವಾರದೊಳಗೆ ಆಸ್ಪತ್ರೆ ಕಾರ್ಯಾರಂಭ ಆಗಲಿದೆ.

ಬೆಂಗಳೂರು(ಆ.03): ಶಿವಾಜಿನಗರದ ಬ್ರಾಡ್‌ ವೇ ಆಸ್ಪತ್ರೆಯನ್ನು ಇಸ್ಫೋಸಿಸ್‌ ಪ್ರತಿಷ್ಠಾನದ ನೆರವಿನೊಂದಿಗೆ 200 ಹಾಸಿಗೆಗಳ ಸುಸಜ್ಜಿತ ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲಾಗುತ್ತಿದ್ದು, ಇದಕ್ಕಾಗಿ ಪ್ರತಿಷ್ಠಾನದ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವಾದ ಇಸ್ಫೋಸಿಸ್‌ ಪ್ರತಿಷ್ಠಾನ ಮತ್ತು ಅದರ ಮುಖ್ಯಸ್ಥರಾದ ಡಾ.ಸುಧಾಮೂರ್ತಿ ಅವರಿಗೆ ಸರ್ಕಾರ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

[t4b-ticker]

You May Also Like

More From Author

+ There are no comments

Add yours