ಬೆಂಗಳೂರು: ನ:17: ಡಿಸೆಂಬರ್ 19 ರಿಂದ 30ರವರೆಗೆ ಕುಂದಾ ನಗರಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ಇಂದು (ನ.17) ತೀರ್ಮಾನ ಮಾಡಿದೆ.
ವಿಧಾನಸೌಧದಲ್ಲಿಂದು ನಡೆದ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಚಳಿಗಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಯಿತು.
ಈ ವೇಳೆ ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಹಾಜರಿದ್ದರು.
ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿಗೆ ಅನುಮೋದನೆ ನೀಡಲಾಯಿತು. ಪತಿ-ಪತ್ನಿ ವರ್ಗಾವಣೆಗೆ ಏಳು ವರ್ಷ ನಿಗಧಿ, ಏಳು ಹೊಸ ವನ್ಯಜೀವಿ ಸಂರಕ್ಷಣಾ ಮೀಸಲು ಪ್ರದೇಶ ಪ್ರಸ್ತಾವನೆಗಳಿಗೆ ಅನುಮೋದನೆ, ರಾಮನಗರದಲ್ಲಿ ರಾಜೀವ್ ಗಾಂಧಿ ವೈದ್ಯಕೀಯ ವಿವಿ ಸ್ಥಾಪನೆಗೆ ಅಸ್ತು, ನಿಮ್ಮನೆ ಸುಮ್ಮನೆ ಎನ್ಜಿಒಗೆ 15 ಗುಂಟೆ ಭೂಮಿ ಮಂಜೂರು, ಏಳು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
[t4b-ticker]
+ There are no comments
Add yours