ಚಳಿಗಾಲದ ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಸಿಎಂ

 

ಬೆಂಗಳೂರು: ನ:17:  ಡಿಸೆಂಬರ್ 19 ರಿಂದ 30ರವರೆಗೆ ಕುಂದಾ ನಗರಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ಇಂದು (ನ.17) ತೀರ್ಮಾನ ಮಾಡಿದೆ.

ವಿಧಾನಸೌಧದಲ್ಲಿಂದು ನಡೆದ ಕ್ಯಾಬಿನೆಟ್​ ಮೀಟಿಂಗ್​ನಲ್ಲಿ ಚಳಿಗಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಯಿತು.

ಈ ವೇಳೆ ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಹಾಜರಿದ್ದರು.

ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿಗೆ ಅನುಮೋದನೆ ನೀಡಲಾಯಿತು. ಪತಿ-ಪತ್ನಿ ವರ್ಗಾವಣೆಗೆ ಏಳು ವರ್ಷ ನಿಗಧಿ, ಏಳು ಹೊಸ ವನ್ಯಜೀವಿ ಸಂರಕ್ಷಣಾ ಮೀಸಲು ಪ್ರದೇಶ ಪ್ರಸ್ತಾವನೆಗಳಿಗೆ ಅನುಮೋದನೆ, ರಾಮನಗರದಲ್ಲಿ ರಾಜೀವ್ ಗಾಂಧಿ ವೈದ್ಯಕೀಯ ವಿವಿ ಸ್ಥಾಪನೆಗೆ ಅಸ್ತು, ನಿಮ್ಮನೆ ಸುಮ್ಮನೆ ಎನ್​ಜಿಒಗೆ 15 ಗುಂಟೆ ಭೂಮಿ ಮಂಜೂರು, ಏಳು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

[t4b-ticker]

You May Also Like

More From Author

+ There are no comments

Add yours